ಮಂಡ್ಯ

ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಹೆಚ್ಚಿದ ಅಪಘಾತ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ

ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು.

ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್​​ಹೆಚ್​ಐ ಅಧಿಕಾರಿಗಳನ್ನು ಸಂಸದೆ ಸುಮಲತಾ ತರಾಟೆಗೆ​ ತೆಗೆದುಕೊಂಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್​ನ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮತನಾಡಿದ ಅವರು ​​ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರಿಯಾದ ಸರ್ವಿಸ್‌ ರಸ್ತೆಗಳಿಲ್ಲ. ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನು ಬಾಕಿ ಇದೆ ಎಂದು ತರಾಟೆಗೆ ತೆಗೆದುಕೊಂಡರು.

ಅಲ್ಲದೇ ಇದರ ನಡುವೆ ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊನ್ನೆ ಚನ್ನಪಟ್ಟಣದ ಬಳಿ ಒಂದು ಟ್ರಕ್​ನ ದೃಶ್ಯ ನೋಡಿದರೇ ಮೈ ನಡುಗಿಸುತ್ತೆ. ರಸ್ತೆ ಇರುವುದು ಜನರ ಅನುಕೂಲಕ್ಕೆ. ಜನರ ಪ್ರಾಣ ಕಳೆದುಕೊಳ್ಳುವುದಕ್ಕಲ್ಲ. ಆದಷ್ಟೂ ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ. ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

lokesh

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

11 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago