ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು.
ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್ಹೆಚ್ಐ ಅಧಿಕಾರಿಗಳನ್ನು ಸಂಸದೆ ಸುಮಲತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್ನ ಕಾವೇರಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮತನಾಡಿದ ಅವರು ದಿನೇ ದಿನೇ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರಿಯಾದ ಸರ್ವಿಸ್ ರಸ್ತೆಗಳಿಲ್ಲ. ಚರಂಡಿ ಕಾಮಗಾರಿಗಳು ಅಲ್ಲಲ್ಲಿ ಇನ್ನು ಬಾಕಿ ಇದೆ ಎಂದು ತರಾಟೆಗೆ ತೆಗೆದುಕೊಂಡರು.
ಅಲ್ಲದೇ ಇದರ ನಡುವೆ ದಿನೇ ದಿನೇ ಅಪಘಾತಗಳಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊನ್ನೆ ಚನ್ನಪಟ್ಟಣದ ಬಳಿ ಒಂದು ಟ್ರಕ್ನ ದೃಶ್ಯ ನೋಡಿದರೇ ಮೈ ನಡುಗಿಸುತ್ತೆ. ರಸ್ತೆ ಇರುವುದು ಜನರ ಅನುಕೂಲಕ್ಕೆ. ಜನರ ಪ್ರಾಣ ಕಳೆದುಕೊಳ್ಳುವುದಕ್ಕಲ್ಲ. ಆದಷ್ಟೂ ಬೇಗ ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ. ಇಲ್ಲವಾದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…