ಮಂಡ್ಯ

ಯೋಗಕ್ಕೆ ಭಾರತವೇ ವಿಶ್ವಗುರು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯೋಗ ಎಂದರೆ ಇಡೀ ವಿಶ್ವವೇ ಭಾರತ ದೇಶವನ್ನು ತಿರುಗಿ ನೋಡುವ ರೀತಿ ಭಾರತ ದೇಶ ಸಾಧನೆ ಮಾಡಿದೆ. ಯೋಗಕ್ಕೆ ಭಾರತ ದೇಶವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಅವರಿಂದು ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಯೋಗ ಎನ್ನುವುದು ಭಾರತ ದೇಶದ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರು ಯೋಗ ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಯೋಗ ಎಂಬುದು ಕೇವಲ ದೈಹಿಕವಾದ ವ್ಯಾಯಮ ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಕ್ರಮ ಮತ್ತು ಆರಾಧನೆಯ ಭಾಗವಾಗಬೇಕು. ಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗದ ಅವಶ್ಯಕತೆ ಇದೆ ಎಂದರು.

ರೋಗ ಬರುವ ಮೊದಲು ಯೋಗವನ್ನು ರೂಢಿಸಿಕೊಳ್ಳಿ. ಯೋಗದಿಂದ ಜೀವನಶೈಲಿ ಸಹ ಬದಲಾಗುತ್ತದೆ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಯೋಗವನ್ನು ಅಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಬಹುದು ಎಂದರು.

ಯೋಗ ಮನಸ್ಸನ್ನು ಹೂವಿನಂತೆ ಅರಳಿಸುತ್ತದೆ. ಯೋಗ ಮಾಡುವವರು‌ ಹೊರ ಪ್ರಪಂಚವನ್ನು ನೋಡುವ ದೃಷ್ಟಿಕೋನ ಉತ್ತಮವಾಗಿರುತ್ತದೆ. ದಿನದ ಒಂದು ಗಂಟೆ ಯೋಗಾಭ್ಯಾಸಕ್ಕೆ ಮೀಸಲಿಟ್ಟರೆ ಇನ್ನುಳಿದ 23 ಗಂಟೆ ಕೆಲಸವನ್ನು ಸಮರ್ಪಕವಾಗಿ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರು ಮಾತನಾಡಿ ಯೋಗಾಸನವನ್ನು ಕೇವಲ ಒಂದು ದಿನಕ್ಕೆ ಮೀಸಲಿಡದೆ ಪ್ರತಿದಿನ ಅಭ್ಯಾಸ ಮಾಡಿ ಆರೋಗ್ಯದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಿ. ಎಲ್ಲಾ ವಯೋಮಿತಿ ಅವರು ಯೋಗಾಭ್ಯಾಸವನ್ನು ಮಾಡಬಹುದು ಎಂದು ಕಿವಿಮಾತು ಹೇಳಿದರು.

ಚಂದ್ರವನ ಆಶ್ರಮದ ಬೇಬಿ ಮಠದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅವರು ಮಾತನಾಡಿ, ಪ್ರಪಂಚದ ಎಲ್ಲೆಡೆ ಆಚರಿಸುವ ಭಾರತದ ಹಬ್ಬ ಎಂದರೆ ಯೋಗಾಸನ. ವಿಶ್ವಕ್ಕೆ ಯೋಗಾಸನವನ್ನು ಪರಿಚಯಿಸಿದ ದೇಶ ಭಾರತ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago