ಮಂಡ್ಯ

ಭಾರತೀಯ ಸಂಸ್ಕೃತಿ ಪ್ರಕೃತಿ ಆರಾಧನೆಯಲ್ಲಿದೆ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಭಾರತೀಯ ಸಂಸ್ಕೃತಿಯ ಪರಂಪರೆ ನಿಂತಿರುವುದೇ ಪ್ರಕೃತಿಯ ಆರಾಧನೆಯಲ್ಲಿ ಪ್ರಕೃತಿ ಸಂರಕ್ಷಣೆ ಎಲ್ಲಾ ಭಾರತೀಯ ನಾಗರೀಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಹೇಳಿದರು.

ಏ.19 ರಂದು ಸ್ಕೋಪ್ ಫೌಂಡೇಶನ್ ಇಂಡಿಯಾ ವತಿಯಿಂದ ಹಲ್ಲೆಗೆರೆಯ ಭೂದೇವಿ ಆಧ್ಯಾತ್ಮಿಕ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮದರ್ ಅರ್ಥ್ ಡೇ ಸೆಲೆಬ್ರೇಶನ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಆಧುನಿಕ ತಂತ್ರಜ್ಞಾನದಲ್ಲಿ ನಾವೆಲ್ಲರೂ ತಲ್ಲೀನರಾಗಿ ನಮ್ಮ ಪೂರ್ವ ಪರಂಪರೆಯನ್ನು ಮರೆಯುತ್ತಿದ್ದೇವೆ, ನಮ್ಮ ಪೂರ್ವಜರು ನಂಬಿ ಆರಾಧಿಸಿ ಕೊಂಡು ಬಂದದ್ದು ಭೂಮಿ ಮತ್ತು ಪ್ರಕೃತಿಯನ್ನ ಹೀಗಾಗಿ ನಾವು ಯಾರೂ ಸಹ ಭೂತಾಯಿಯನ್ನು ಮರೆಯುವಂತಿಲ್ಲ ಎಂದರು.

ಮನುಷ್ಯ ತನ್ನ ಆಸೆ ಕೂಪಕ್ಕೆ ಬಿದ್ದು ಭೂ ಸಂಪತ್ತನ್ನು ಲೂಟಿ ಮಾಡುತ್ತಿದ್ದಾನೆ, ಪ್ರಕೃತಿಯನ್ನು ವಿನಾಶದತ್ತ ಕೊಂಡೊಯ್ಯುತ್ತಿದ್ದಾನೆ, ಭೂಮಿಯ ಒಡಲನ್ನು ಎಷ್ಟೇ ಬಗೆದರು ಮುನಿಸಾಗದೆ ಭೂತಾಯಿ ಎಲ್ಲರನ್ನೂ ತನ್ನ ಮಕ್ಕಳಂತೆ ಆರೈಕೆ ಮಾಡಿಕೊಂಡು ಬರುತ್ತಿದೆ, ಭೂಮಿಗೆ ಭಾರತದಲ್ಲಿ ಪೂಜನೀಯ ಸ್ಥಾನವಿದೆ, ನಮ್ಮ ಮುಂದಿನ ಪೀಳಿಗೆಗೆ ಭೂಮಿಯ ಆರಾಧನೆ ಮತ್ತು ಸಂರಕ್ಷಣೆಯ ಜವಾಬ್ದಾರಿ ನೀಡಬೇಕಿದೆ ಎಂದು ಹೇಳಿದರು.

ಅದೇ ನಿಟ್ಟಿನಲ್ಲಿ ಹಲ್ಲೆಗೆರೆ ಮೂರ್ತಿ ರವರು ಪ್ರಕೃತಿ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿದ್ದಾರೆ, ಪ್ರಕೃತಿ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬರುವುದರಿಂದ ಮುಂದಿನ ಪೀಳಿಗೆಯ ಭವಿಷ್ಯ ಉಜ್ವಲವಾಗಿ ಪ್ರಜ್ವಲಿಸುತ್ತದೆ ಎಂದು ಹೇಳಿದರು.

ನಂತರ ಮಾತನಾಡಿದ ಡಾ. ಆನಂದ್ ಭಟ್ ಸೊಸೈಟಿ ಆಫ್ ಚಿಲ್ಡ್ರನ್ ಪ್ಲಾನೆಟ್ ಆನ್ ಅರ್ಥ್ (SCOPE) ಫೌಂಡೇಶನ್ ವತಿಯಿಂದ ಪ್ರಕೃತಿಗೆ ಮೀಸಲಾಗಿರುವ ಸ್ಮಾರಕವನ್ನು ನಿರ್ಮಾಣ ಮಾಡಲಾಗುತ್ತಿದೆ, ಇಡೀ ವಿಶ್ವದಲ್ಲೇ ಇದೆ ಮೊದಲ ಭೂದೇವಿಗೆ ಸಮರ್ಪಿತವಾದ ಸ್ಮಾರಕವಾಗಿ ನಿರ್ಮಾಣಗೊಳ್ಳಲಿದೆ, ಮುಂದೆ ಇದೊಂದು ಐತಿಹಾಸಿಕ ಸ್ಮಾರಕವಾಗಿ ಗುರುತಿಸಿಕೊಳ್ಳಲಿದೆ ಎಂದು ತಿಳಿಸಿದರು.

ಸ್ಕೋಪ್ (SCOPE ) ಫೌಂಡೇಶನ್ ಮೂಲತಃ ಅನೇಕ ಸಮಾಜಮುಖಿ ಕೆಲಸಗಳನ್ನು ಹಲ್ಲೆಗೆರೆ ಮೂರ್ತಿ ಅವರು ನಡೆಸಿಕೊಟ್ಟಿದ್ದಾರೆ, ಮುಂದಿನ ದಿನಗಳಲ್ಲಿ ಹಲ್ಲೆಗೆರೆಯಲ್ಲಿ ಆರೋಗ್ಯ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗಿದೆ, ಮುಂದಿನ ದಿನಗಳಲ್ಲಿ ಭೂಮಿ ಸ್ಮಾರಕ ಪ್ರವಾಸೋದ್ಯಮ ಪಟ್ಟಿಗೆ ಸೇರಿದ ನಂತರ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು.

ನಂತರ ಸ್ಕೋಪ್ ಫೌಂಡೇಶನ್ ಸಂಸ್ಥಾಪಕ ಮೂರ್ತಿ ಮಾತನಾಡಿ, ಜಗತ್ತಿನಾದ್ಯಂತ ನಾವೆಲ್ಲರೂ ದೇಶ, ರಾಜ್ಯ, ಜಾತಿ, ಧರ್ಮ ಎಂದು ವಿಕೇಂದ್ರೀಕರಣಗೊಂಡಿದ್ದೇವೆ, ವಾಸ್ತವವೇನೆಂದರೆ ನಾವೆಲ್ಲರೂ ಮನುಷ್ಯರು, ನಮ್ಮೆಲ್ಲರ ತಾಯಿ ಒಬ್ಬಳೆ ಅದೇ ಭೂಮಿ ತಾಯಿ, ಆಕೆಯ ಪ್ರೀತಿ ಸಹನೆ ಅನುಕಂಪ ಗಮನಿಸದೆ, ಭೂಮಿಯ ಖನಿಜ ಸಂಪತ್ತನ್ನು ಲೂಟಿ ಮಾಡಲು ನಿಂತಿದ್ದೇವೆ, ಭೂದೇವಿ ಆಧ್ಯಾತ್ಮಿಕ ಕೇಂದ್ರ ಸ್ಥಾಪಿಸಿದ ನಂತರ ಭೂಮಿಯ ಸಹನೆ, ಕೊಡುಗೆಯ ನೈಸರ್ಗಿಕ ಸಂಪತ್ತುಗಳಾದ ಗಾಳಿ, ನೀರು, ಬೆಳಕುಗಳ ಮೌಲ್ಯವನ್ನು ಪಸರಿಸುತ್ತೇವೆ, ತಾಯಿಯ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿ, ಜಾನಪದ ಕಲಾವಿದ ಡಾ. ಕಾ ರಮೇಶ್ವರಪ್ಪ, ಗಣ್ಯರಾದ ವೆಂಕಟೇಶ್, ತ್ಯಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

24 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

49 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

53 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago