_MP Yaduveer
ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಹಸ್ರಾರು ವರ್ಷಗಳಿಂದ ಭಾರತೀಯ ಸಂಸ್ಕತಿ ಮತ್ತು ಪರಂಪರೆ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. ವೇದೋಪನಿಷತ್ತುಗಳು ದೇಶದ ಹಿರಿಮೆಯನ್ನು ಜಗತ್ತಿಗೆ ಸಾರಿವೆ. ಸಂಸ್ಕತ ಭಾಷೆಯಲ್ಲಿರುವ ವೇದ, ವೇದಾಂತ, ಉಪನಿಷತ್ತುಗಳು ನಿರಂತರವಾಗಿ ಜನರಿಗೆ ತಲುಪುತ್ತಿವೆ. ಇದರಿಂದ ಇತರ ಭಾಷೆಗಳೂ ಶ್ರೀಮಂತಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪರಂಪರೆಯನ್ನು ಜಗತ್ತಿನಾದ್ಯಂತ ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮೈಸೂರು ಅರಸರು ಸಿಡುಬು ಕಾಯಿಲೆಗೆ ಇಂಗ್ಲಿಷ್ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಚಾರ ಮಾಡಿಸಿದ್ದರು. ನಮ್ಮ ನೈಜ ಪರಂಪರೆ ಉಳಿಸುವಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಾರೆ. ಈ ದಿಸೆಯಲ್ಲಿ ಕಾವೇರಿ ಕನ್ಯಾ ಗುರುಕುಲ ಭವಿಷ್ಯದ ತಾಯಂದಿರಿಗೆ ಸಂಸ್ಕ ತಿ, ಸಂಸ್ಕಾರಗಳನ್ನು ಕಲಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳೀದರು.
ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಕೆ.ಕೆ.ಸುಬ್ರಹ್ಮಣಿ ಮಾತನಾಡಿ, ೨೦೧೩ರಲ್ಲಿ ಆರಂಭವಾದ ಕಾವೇರಿ ಕನ್ಯಾ ಗುರುಕುಲ ಇದುವರೆಗೆ ನೂರಾರು ಹೆಣ್ಣು ಮಕ್ಕಳಿಗೆ ಸಂಸ್ಕ ತ, ವೇದಾಂತ, ಯೋಗ, ಭವದ್ಗೀತೆ, ಬ್ರಹ್ಮ ಸೂತ್ರಗಳ ಸಹಿತ ಪಂಚಮುಖಿ ಶಿಕ್ಷಣ ನೀಡುತ್ತಿದೆ. ಉತ್ತರ ಕರ್ನಾಟಕದ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಈ ವರ್ಷದಿಂದ ಕನ್ಯಾ ಗುರುಕುಲವನ್ನು ಧಾರವಾಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…