_MP Yaduveer
ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಹಸ್ರಾರು ವರ್ಷಗಳಿಂದ ಭಾರತೀಯ ಸಂಸ್ಕತಿ ಮತ್ತು ಪರಂಪರೆ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. ವೇದೋಪನಿಷತ್ತುಗಳು ದೇಶದ ಹಿರಿಮೆಯನ್ನು ಜಗತ್ತಿಗೆ ಸಾರಿವೆ. ಸಂಸ್ಕತ ಭಾಷೆಯಲ್ಲಿರುವ ವೇದ, ವೇದಾಂತ, ಉಪನಿಷತ್ತುಗಳು ನಿರಂತರವಾಗಿ ಜನರಿಗೆ ತಲುಪುತ್ತಿವೆ. ಇದರಿಂದ ಇತರ ಭಾಷೆಗಳೂ ಶ್ರೀಮಂತಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪರಂಪರೆಯನ್ನು ಜಗತ್ತಿನಾದ್ಯಂತ ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮೈಸೂರು ಅರಸರು ಸಿಡುಬು ಕಾಯಿಲೆಗೆ ಇಂಗ್ಲಿಷ್ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಚಾರ ಮಾಡಿಸಿದ್ದರು. ನಮ್ಮ ನೈಜ ಪರಂಪರೆ ಉಳಿಸುವಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಾರೆ. ಈ ದಿಸೆಯಲ್ಲಿ ಕಾವೇರಿ ಕನ್ಯಾ ಗುರುಕುಲ ಭವಿಷ್ಯದ ತಾಯಂದಿರಿಗೆ ಸಂಸ್ಕ ತಿ, ಸಂಸ್ಕಾರಗಳನ್ನು ಕಲಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳೀದರು.
ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಕೆ.ಕೆ.ಸುಬ್ರಹ್ಮಣಿ ಮಾತನಾಡಿ, ೨೦೧೩ರಲ್ಲಿ ಆರಂಭವಾದ ಕಾವೇರಿ ಕನ್ಯಾ ಗುರುಕುಲ ಇದುವರೆಗೆ ನೂರಾರು ಹೆಣ್ಣು ಮಕ್ಕಳಿಗೆ ಸಂಸ್ಕ ತ, ವೇದಾಂತ, ಯೋಗ, ಭವದ್ಗೀತೆ, ಬ್ರಹ್ಮ ಸೂತ್ರಗಳ ಸಹಿತ ಪಂಚಮುಖಿ ಶಿಕ್ಷಣ ನೀಡುತ್ತಿದೆ. ಉತ್ತರ ಕರ್ನಾಟಕದ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಈ ವರ್ಷದಿಂದ ಕನ್ಯಾ ಗುರುಕುಲವನ್ನು ಧಾರವಾಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…