ಮಂಡ್ಯ

ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ : ಸಂಸದ ಯದುವೀರ್‌

ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಹಸ್ರಾರು ವರ್ಷಗಳಿಂದ ಭಾರತೀಯ ಸಂಸ್ಕತಿ ಮತ್ತು ಪರಂಪರೆ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. ವೇದೋಪನಿಷತ್ತುಗಳು ದೇಶದ ಹಿರಿಮೆಯನ್ನು ಜಗತ್ತಿಗೆ ಸಾರಿವೆ. ಸಂಸ್ಕತ ಭಾಷೆಯಲ್ಲಿರುವ ವೇದ, ವೇದಾಂತ, ಉಪನಿಷತ್ತುಗಳು ನಿರಂತರವಾಗಿ ಜನರಿಗೆ ತಲುಪುತ್ತಿವೆ. ಇದರಿಂದ ಇತರ ಭಾಷೆಗಳೂ ಶ್ರೀಮಂತಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪರಂಪರೆಯನ್ನು ಜಗತ್ತಿನಾದ್ಯಂತ ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ಅರಸರು ಸಿಡುಬು ಕಾಯಿಲೆಗೆ ಇಂಗ್ಲಿಷ್ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಚಾರ ಮಾಡಿಸಿದ್ದರು. ನಮ್ಮ ನೈಜ ಪರಂಪರೆ ಉಳಿಸುವಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಾರೆ. ಈ ದಿಸೆಯಲ್ಲಿ ಕಾವೇರಿ ಕನ್ಯಾ ಗುರುಕುಲ ಭವಿಷ್ಯದ ತಾಯಂದಿರಿಗೆ ಸಂಸ್ಕ ತಿ, ಸಂಸ್ಕಾರಗಳನ್ನು ಕಲಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳೀದರು.

ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಕೆ.ಕೆ.ಸುಬ್ರಹ್ಮಣಿ ಮಾತನಾಡಿ, ೨೦೧೩ರಲ್ಲಿ ಆರಂಭವಾದ ಕಾವೇರಿ ಕನ್ಯಾ ಗುರುಕುಲ ಇದುವರೆಗೆ ನೂರಾರು ಹೆಣ್ಣು ಮಕ್ಕಳಿಗೆ ಸಂಸ್ಕ ತ, ವೇದಾಂತ, ಯೋಗ, ಭವದ್ಗೀತೆ, ಬ್ರಹ್ಮ ಸೂತ್ರಗಳ ಸಹಿತ ಪಂಚಮುಖಿ ಶಿಕ್ಷಣ ನೀಡುತ್ತಿದೆ. ಉತ್ತರ ಕರ್ನಾಟಕದ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಈ ವರ್ಷದಿಂದ ಕನ್ಯಾ ಗುರುಕುಲವನ್ನು ಧಾರವಾಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

42 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago