ಮಂಡ್ಯ

ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ : ಸಂಸದ ಯದುವೀರ್‌

ಶ್ರೀರಂಗಪಟ್ಟಣ: ಭಾರತದ ಪರಂಪರೆಗೆ ಸೈನ್ಯಕ್ಕೆ ಇರುವಷ್ಟೇ ಶಕ್ತಿ ಇದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಸಮೀಪದ ಕಾವೇರಿ ಕನ್ಯಾ ಗುರುಕುಲದಲ್ಲಿ ಸೋಮವಾರ ಕನ್ಯಾ ಗುರುಕುಲದ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಹಸ್ರಾರು ವರ್ಷಗಳಿಂದ ಭಾರತೀಯ ಸಂಸ್ಕತಿ ಮತ್ತು ಪರಂಪರೆ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. ವೇದೋಪನಿಷತ್ತುಗಳು ದೇಶದ ಹಿರಿಮೆಯನ್ನು ಜಗತ್ತಿಗೆ ಸಾರಿವೆ. ಸಂಸ್ಕತ ಭಾಷೆಯಲ್ಲಿರುವ ವೇದ, ವೇದಾಂತ, ಉಪನಿಷತ್ತುಗಳು ನಿರಂತರವಾಗಿ ಜನರಿಗೆ ತಲುಪುತ್ತಿವೆ. ಇದರಿಂದ ಇತರ ಭಾಷೆಗಳೂ ಶ್ರೀಮಂತಗೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪರಂಪರೆಯನ್ನು ಜಗತ್ತಿನಾದ್ಯಂತ ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ಅರಸರು ಸಿಡುಬು ಕಾಯಿಲೆಗೆ ಇಂಗ್ಲಿಷ್ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಚಾರ ಮಾಡಿಸಿದ್ದರು. ನಮ್ಮ ನೈಜ ಪರಂಪರೆ ಉಳಿಸುವಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಾರೆ. ಈ ದಿಸೆಯಲ್ಲಿ ಕಾವೇರಿ ಕನ್ಯಾ ಗುರುಕುಲ ಭವಿಷ್ಯದ ತಾಯಂದಿರಿಗೆ ಸಂಸ್ಕ ತಿ, ಸಂಸ್ಕಾರಗಳನ್ನು ಕಲಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳೀದರು.

ಕಾವೇರಿ ಕನ್ಯಾ ಗುರುಕುಲದ ಮುಖ್ಯಸ್ಥ ಕೆ.ಕೆ.ಸುಬ್ರಹ್ಮಣಿ ಮಾತನಾಡಿ, ೨೦೧೩ರಲ್ಲಿ ಆರಂಭವಾದ ಕಾವೇರಿ ಕನ್ಯಾ ಗುರುಕುಲ ಇದುವರೆಗೆ ನೂರಾರು ಹೆಣ್ಣು ಮಕ್ಕಳಿಗೆ ಸಂಸ್ಕ ತ, ವೇದಾಂತ, ಯೋಗ, ಭವದ್ಗೀತೆ, ಬ್ರಹ್ಮ ಸೂತ್ರಗಳ ಸಹಿತ ಪಂಚಮುಖಿ ಶಿಕ್ಷಣ ನೀಡುತ್ತಿದೆ. ಉತ್ತರ ಕರ್ನಾಟಕದ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಈ ವರ್ಷದಿಂದ ಕನ್ಯಾ ಗುರುಕುಲವನ್ನು ಧಾರವಾಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

9 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

10 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

10 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

11 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

11 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

12 hours ago