ಮಂಡ್ಯ

ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಆಯ್ಕೆಯಲ್ಲಿ ಅನ್ಯಾಯ; ಮಧುಸೂದನ್‌ ಆರೋಪ

ಮಂಡ್ಯ: ಕೇಂದ್ರ ಸರ್ಕಾರದಿಂದ ಅತ್ಯುತ್ತಮ ಗ್ರಾಮ ಪಂಚಾಯಿತಿಗಳಿಗೆ ಕೊಡಮಾಡುವ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆಯಲ್ಲಿ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಗೆ ಅನ್ಯಾಯವಾಗಿದೆ ಎಂದು ಗ್ರಾ.ಪಂ ಸದಸ್ಯ, ವಕೀಲ ಮಧುಸೂದನ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದರಿ ಪುರಸ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ೧೩೪ ಪ್ರಶ್ನಾವಳಿಗಳ ಮೂಲಕ ಗ್ರಾ.ಪಂಗಳಿಗೆ ಅಂಕಗಳನ್ನು ನೀಡಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು, ಈ ಅಂತಿಮ ಪಟ್ಟಿಯಲ್ಲಿ ಹೆಮ್ಮನಹಳ್ಳಿ, ಭಾರತೀನಗರ, ಮತ್ತು ಕದಲೂರು ಗ್ರಾ.ಪಂಗಳ ಹೆಸರುಗಳಿದ್ದು, ನಮಗಿಂತ ಕಡಿಮೆ ಅಂಕ ಪಡೆದ ಭಾರತೀನಗರ ಗ್ರಾ.ಪಂ ಆಯ್ಕೆ ಮಾಡಿದ್ದಾರೆ ಎಂದು ದೂರಿದರು.

ಈ ಆಯ್ಕೆಯ ವಿರುದ್ಧ ಜಿ.ಪಂ ಸಿಇಓ ಮತ್ತು ಪಂಚಾಯಿತ್‌ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಹಾಗೂ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, ಜಿ.ಪಂ ಸಿಇಓ ಅವರು ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಓಗಳ ಜೊತೆ ನವೆಂಬರ್ ೩ರಂದು ಜಿ.ಪಂ ನಲ್ಲಿ ಸಭೆ ನಡೆಸಲಾಗಿದ್ದು ಹೆಮ್ಮನಹಳ್ಳಿ, ಭಾರತೀನಗರ ಗ್ರಾ.ಪಂಗಳ ಅಂಕಗಳನ್ನು ಪರಿಶೀಲನೆ ನಡೆಸಲಾಗಿದ್ದು, ಹೆಮ್ಮನಹಳ್ಳಿ ಗ್ರಾ.ಪಂಗೆ ೨೧ ಹೆಚ್ಚು ಅಂಕಗಳು ಲಭಿಸಿರುವುದು ದೃಢಪಟ್ಟಿದೆ ಎಂದರು.

ಭಾರತೀನಗರ ಗ್ರಾ.ಪಂಗೆ ಅಂಕ ದೊರೆಯದ ಹಲವು ಭಾಗಗಳಿಗೆ ೨ ದಿನಗಳಲ್ಲಿ ಕೃತಕ ದಾಖಲಾತಿ ಸೃಷ್ಠಿಸಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿದ್ದು, ಇದು ಮೇಲಧಿಕಾರಿಗಳ ಮಟ್ಟದಲ್ಲಿ ನಡೆದಿರುವ ವಂಚನೆಯು ಅಕ್ರಮವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಅಧಿಕಾರಿ ಮಟ್ಟದಲ್ಲಿ ಅನ್ಯಾಯವಾಗಿದ್ದು, ಈ ಸಂಬಂಧ ಅಧಿಕಾರಿಗಳು ನ್ಯಾಯ ದೊರಕಿಸಿಕೊಡದೇ ಹೋದಲ್ಲಿ ನ್ಯಾಯಾಲಯದ ಮೆಟ್ಟಿಲು ಏರುವುದಾಗಿ ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಗೋಷ್ಠಿಯಲ್ಲಿ ಹೆಮ್ಮನಹಳ್ಳಿ ಗ್ರಾ.ಪಂ ಅಧ್ಯಕ್ಷೆ ವೀಣಾ, ಸದಸ್ಯ್ಯ ಕಮಲಾಕ್ಷಿ, ಹೆಚ್.ಸಿ.ಉಮೇಶ್, ನಾಗೇಶ್, ಹೆಚ್.ಕೆ.ನಂದೀಶ್‌ಗೌಡ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

55 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

1 hour ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

1 hour ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

15 hours ago