ಮಂಡ್ಯ

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ದಾವಣಗೆರೆ ಉಪ ಚುಣಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತಗೊಂಡ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ನಸೀರ್ ಅಹ್ಮದ್ ಅವರ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ಧಾರ್ಮಿಕ ಮುಖಂಡರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಈಗಾಗಲೇ ಪರಿಷತ್ ಸದಸ್ಯರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ನಜೀರ್ ಅಹ್ಮದ್ ಅವರ ತಲೆದಂಡವಾಗಿದೆ. ಕಾಂಗ್ರೆಸ್ ಪಕ್ಷ ಕೈಗೊಂಡ ಈ ಕ್ರಮ ಇದೀಗ ರಾಜ್ಯ ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರನ್ನು ಕೆರಳುವಂತೆ ಮಾಡಿದೆ. ಅದಕ್ಕೆ ಪೂರಕವಾಗುವಂತೆ ಶನಿವಾರ ಮಂಡ್ಯದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಇಂದು ಮಂಡ್ಯದ ಜಾಮಿಯ ಮಸೀದಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮುಸ್ಲಿಂ ಧರ್ಮಗುರುಗಳು, ಮುಸ್ಲಿಂರೆಲ್ಲರೂ ಕಾಂಗ್ರೆಸ್‌ ಪಕ್ಷದ ಪರ ಇದ್ದಾರೆ. ಕಾಂಗ್ರೆಸ್‌ ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂಬ ಭಾವನೆ ಇದೆ. ಹೀಗಾಗಿ ನಮ್ಮನ್ನೆ ಕೇವಲವಾಗಿ ನೋಡಲಾಗಿದೆ. ಆದರೆ, ನಮಗೆ ಬೇರೆ ಪಕ್ಷದ ಆಯ್ಕೆಯೂ ಇದೆ ಎಂದು ಕೈ ವರಿಷ್ಟರು ಮತ್ತು ನಾಯಕರಿಗೆ ತಿಳಿದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯ ಕಾರಣ. ಆದರೂ ನಾವು ಅದನ್ನ ಹೇಳಲು ಹೋಗಲ್ಲ. ನಮ್ಮ ಧರ್ಮದವರು ಶೇ.91ರಷ್ಟು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನೀವು ಅಧಿಕಾರಕ್ಕೆ ಬರಲು ನಾವು ಕಾರಣಕರ್ತರಾಗಿದ್ದೇವೆ. ಹಗಲಿರುಳು ನಮ್ಮ ಮುಸ್ಲಿಂರು ನಿಮ್ಮ ಪಕ್ಷದ ಪರ ಕೆಲಸ ಮಾಡಿದ್ದೇವೆ. ಆದರೂ ನಮಗೆ ಒಂದು ಗ್ಲಾಸ್ ನೀರು ಕೊಡಲು ಹಿಂದೇಟು ಯಾಕೆ? ಎಂದು ಸಿಎಂ ಸಿದ್ದರಾಮಯ್ಯಗೆ ಮುಸ್ಲಿಂ ಧರ್ಮ ಗುರುಗಳ ಪ್ರಶ್ನೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಹಿಂದಿನಿಂದ ಶಾಮನೂರು ಶಿವಶಂಕರಪ್ಪರನ್ನ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಬಾರಿ ನಮಗೊಂದು ಅವಕಾಶ ಕೊಡಿ ಅಂತಾ ಕೇಳಿದ್ದು ತಪ್ಪ? ಮಲ್ಲಿಕಾರ್ಜುನ ಶಾಸಕರಾಗಿ ಸಚಿವರಾಗಿದ್ದಾರೆ, ಪ್ರಭಾ ಸಂಸದರಾಗಿದ್ದಾರೆ.

ಸಮರ್ಥ್ ಗೆ ಇನ್ನೂ ವಯಸ್ಸು ಇತ್ತು. ಮುಂದಿನ ಬಾರಿ ಅವಕಾಶ ಕೊಡ್ತೀವಿ ಎಂದು ಹೇಳಬಹುದಿತ್ತು. ನಾವು ಯಾವತ್ತೂ ಸಚಿವ ಸ್ಥಾನ ಕೊಡಿ ಅಂತ ಕೇಳಿಲ್ಲ. ಬದಲಾಗಿ ಟಿಕೆಟ್‌ ನೀಡಿ ಎಂದು ಕೇಳಿದ್ದೇ ತಪ್ಪಾ? ಪ್ರಣಾಳಿಕೆಯಲ್ಲಿ ಮುಸ್ಲಿಂರಿಗೆ ಸಾಕಷ್ಟು ಭರವಸೆ ಕೊಟ್ಟಿದ್ದೀರಿ. ನೀವು ನಮ್ಮನ್ನ ಬೇಕಾದಂಗೆ, ಬೇಕಾದಾಗ ಬಳಸಿಕೊಂಡ್ರಿ, ಇವಾಗ ನಡು ನೀರಿನಲ್ಲಿ ಕೈಬಿಟ್ಟಿದ್ದೀರಿ. ಒಂದು ನೋಟೀಸ್ ಕೂಡ ಕೊಡದೆ ಈ ರೀತಿಯ ಕ್ರಮ ಎಷ್ಟು ಸರಿ. ಆತುರಾತುರವಾಗಿ ಈ ರೀತಿಯ ಕ್ರಮ ತೆಗೆದುಕೊಂಡಿರುವುದೇ ಗೊತ್ತಾಗುತ್ತೆ ನಮ್ಮನ್ನ ಎಷ್ಟು ನಿರ್ಲಕ್ಷ್ಯ ಮಾಡ್ತಿದ್ದೀರಿ ಎಂದು ಖಾರವಾಗಿಯೇ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

20 mins ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

1 hour ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

3 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

6 hours ago