ಮಂಡ್ಯ

ಅವಶ್ಯಕವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ‌ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

10 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

21 mins ago

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago