ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…