ಮಂಡ್ಯ

ಅಂತರ್‌ಜಿಲ್ಲಾ ಕಳ್ಳನ ಬಂಧನ ; ಆರೋಪಿಯಿಂದ 490 ಗ್ರಾಂ ಚಿನ್ನ, ರೂ.40 ಲಕ್ಷ ವಶಕ್ಕೆ

ಮಂಡ್ಯ: ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು, ೪೯೦ ಗ್ರಾಂ ಚಿನ್ನದ ವಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ ೪೦ ಲಕ್ಷ ರೂ.ಗಳಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮುದಿಗೆರೆ ಗ್ರಾಮದ ಎಂ.ವಿ.ರಂಗೇಗೌಡ ಉ.ಸಂತೋಷ ಅಲಿಯಾಸ್ ಐಪಿಎಲ್ ಸಂತೋಷ (೩೭) ಬಂಽತ ಆರೋಪಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇ ೨೦ರಂದು ನಾಗಮಂಗಲ ತಾಲ್ಲೂಕಿನ ಬಿದರಕೆರೆ ಗ್ರಾಮದ ಗಂಗೇಗೌಡ ಎಂಬವರು ಬಿಂಡಿಗನವಿಲೆ ಪೊಲೀಸ್ ಠಾಣೆಗೆ ಬಂದು ಮೇ ೧೮ರಂದು ಮನೆಯ ಬೀಗ ತೆಗೆದು ಬೀರುವಿನಲ್ಲಿದ್ದ ಸುಮಾರು ೨೦ ಗ್ರಾಂ ಚಿನ್ನಾಭರಣ ಮತ್ತು ೯೭ ಸಾವಿರ ರೂ. ನಗದನ್ನು ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಈ ಪ್ರಕರಣ ಭೇದಿಸಲು ಅಪರ ಪೊಲೀಸ್ ಅಧಿಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಡಿವೈಎಸ್ಪಿ ಬಿ.ಚಲುವರಾಜು ಅವರ ಮಾರ್ಗದರ್ಶನದಲ್ಲಿ ನಾಗಮಂಗಲ ಗ್ರಾಮಾಂತರ ಠಾಣೆಯ ಸಿಪಿಐ ಕೆ.ಎಸ್.ನಿರಂಜನ, ಪಿಎಸ್‌ಐಗಳಾದ ವೈ.ಎನ್. ರವಿಕುಮಾರ್, ಟಿ.ಮಾರುತಿ, ಪ್ರಶಾಂತ್ ಕುಮಾರ್ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಅದರಂತೆ ಜೂ.೧ರಂದು ಹಾಸನದಲ್ಲಿದ್ದ ಆರೋಪಿ ಸಂತೋಷನನ್ನು ಬಂಧಿಸಿ, ವಿಚಾರಣೆ ಮಾಡಲಾಗಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು.

ಆರೋಪಿ ಸಂತೋಷ್ ವಿರುದ್ಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ೩, ಬೆಳ್ಳೂರು ಠಾಣೆಯಲ್ಲಿ ೪, ನಾಗಮಂಗಲ ಗ್ರಾಮಾಂತರ ೧, ತುರುವೇಕೆರೆ ಠಾಣೆ ೧, ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಹಲವು ಬಾರಿ ಸೆರೆವಾಸ ಅನುಭವಿಸಿದ್ದರೂ ಹೊರಬಂದ ನಂತರ ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದನು ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್ ಕುಮಾರ್, ಮಧು ಕುಮಾರ, ಇಂದ್ರಕುಮಾರ್, ರವಿಕಿರಣ್, ಲೋಕೇಶ್, ದಿನೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಶ್ಲಾಘಿಸಿದರು.

ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾ
ಮಂಡ್ಯ ನಗರದ ಹಲವು ಕಡೆ ಸಿಸಿ ಕ್ಯಾಮೆರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಇನ್ನೂ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಇದರಿಂದಾಗಿ ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚಬಹುದಾಗಿದೆ. ಮಳವಳ್ಳಿ ಪಟ್ಟಣದಲ್ಲಿ ೧೦೦ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದೇ ರೀತಿ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

23 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

28 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

33 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

39 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago