ಮಂಡ್ಯ

ಅಂತರ್‌ಜಿಲ್ಲಾ ಕಳ್ಳನ ಬಂಧನ ; ಆರೋಪಿಯಿಂದ 490 ಗ್ರಾಂ ಚಿನ್ನ, ರೂ.40 ಲಕ್ಷ ವಶಕ್ಕೆ

ಮಂಡ್ಯ: ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸಿರುವ ನಾಗಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು, ೪೯೦ ಗ್ರಾಂ ಚಿನ್ನದ ವಡವೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ ೪೦ ಲಕ್ಷ ರೂ.ಗಳಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮುದಿಗೆರೆ ಗ್ರಾಮದ ಎಂ.ವಿ.ರಂಗೇಗೌಡ ಉ.ಸಂತೋಷ ಅಲಿಯಾಸ್ ಐಪಿಎಲ್ ಸಂತೋಷ (೩೭) ಬಂಽತ ಆರೋಪಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇ ೨೦ರಂದು ನಾಗಮಂಗಲ ತಾಲ್ಲೂಕಿನ ಬಿದರಕೆರೆ ಗ್ರಾಮದ ಗಂಗೇಗೌಡ ಎಂಬವರು ಬಿಂಡಿಗನವಿಲೆ ಪೊಲೀಸ್ ಠಾಣೆಗೆ ಬಂದು ಮೇ ೧೮ರಂದು ಮನೆಯ ಬೀಗ ತೆಗೆದು ಬೀರುವಿನಲ್ಲಿದ್ದ ಸುಮಾರು ೨೦ ಗ್ರಾಂ ಚಿನ್ನಾಭರಣ ಮತ್ತು ೯೭ ಸಾವಿರ ರೂ. ನಗದನ್ನು ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಈ ಪ್ರಕರಣ ಭೇದಿಸಲು ಅಪರ ಪೊಲೀಸ್ ಅಧಿಕ್ಷಕರಾದ ಸಿ.ಇ. ತಿಮ್ಮಯ್ಯ, ಗಂಗಾಧರಸ್ವಾಮಿ, ಡಿವೈಎಸ್ಪಿ ಬಿ.ಚಲುವರಾಜು ಅವರ ಮಾರ್ಗದರ್ಶನದಲ್ಲಿ ನಾಗಮಂಗಲ ಗ್ರಾಮಾಂತರ ಠಾಣೆಯ ಸಿಪಿಐ ಕೆ.ಎಸ್.ನಿರಂಜನ, ಪಿಎಸ್‌ಐಗಳಾದ ವೈ.ಎನ್. ರವಿಕುಮಾರ್, ಟಿ.ಮಾರುತಿ, ಪ್ರಶಾಂತ್ ಕುಮಾರ್ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಅದರಂತೆ ಜೂ.೧ರಂದು ಹಾಸನದಲ್ಲಿದ್ದ ಆರೋಪಿ ಸಂತೋಷನನ್ನು ಬಂಧಿಸಿ, ವಿಚಾರಣೆ ಮಾಡಲಾಗಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು.

ಆರೋಪಿ ಸಂತೋಷ್ ವಿರುದ್ಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ೩, ಬೆಳ್ಳೂರು ಠಾಣೆಯಲ್ಲಿ ೪, ನಾಗಮಂಗಲ ಗ್ರಾಮಾಂತರ ೧, ತುರುವೇಕೆರೆ ಠಾಣೆ ೧, ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಹಲವು ಬಾರಿ ಸೆರೆವಾಸ ಅನುಭವಿಸಿದ್ದರೂ ಹೊರಬಂದ ನಂತರ ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದನು ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿಗಳಾದ ಪ್ರಶಾಂತ್ ಕುಮಾರ್, ಮಧು ಕುಮಾರ, ಇಂದ್ರಕುಮಾರ್, ರವಿಕಿರಣ್, ಲೋಕೇಶ್, ದಿನೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಶ್ಲಾಘಿಸಿದರು.

ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾ
ಮಂಡ್ಯ ನಗರದ ಹಲವು ಕಡೆ ಸಿಸಿ ಕ್ಯಾಮೆರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಇನ್ನೂ ಪ್ರಮುಖ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಇದರಿಂದಾಗಿ ಅಪರಾಧ ಪ್ರಕರಣಗಳನ್ನು ಪತ್ತೆಹಚ್ಚಬಹುದಾಗಿದೆ. ಮಳವಳ್ಳಿ ಪಟ್ಟಣದಲ್ಲಿ ೧೦೦ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದೇ ರೀತಿ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago