ಮಂಡ್ಯ

ಒಳ ಮೀಸಲಾತಿ : ಮೇ 5 ರಿಂದ ದತ್ತಾಂಶ ಸಂಗ್ರಹಣೆ

ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್‌.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 17 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅಧಿಕಾರಿಗಳು ಸಮೀಕ್ಷೆ ನಡಯುವ ಸಂದರ್ಭದಲ್ಲಿ ಜಿಲ್ಲೆಯ‌ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ‌ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿರುತ್ತದೆ. ಇದಕ್ಕಾಗಿ ಏಪ್ರಿಲ್ 28 ರಂದು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಸುವ ಎನ್ಮುರೇಟರ್ಸ್ (enumerators) ಗೆ ತರಬೇತಿ ನೀಡಲಾಗುವುದು ಎಂದರು.

ಎನ್ಮುರೇಟರ್ಸ್ ಗಳನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಎನ್ಮುರೇಟರ್ಸ್ ಗುಂಪಿನ ಕೆಲಸವನ್ನು ಪರಿಶೀಲಿಸಲು ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಮೇ 17 ರ ಸಮೀಕ್ಷೆ ಮುಗಿದ ನಂತರ ಮೇ 19 ರಿಂದ 22 ರವರೆಗೆ ಸ್ಥಳ ನಿಗದಿ ಮಾಡಿ ಶಿಬಿರ ನಡೆಸಲಾಗುವುದು. ಶಿಬಿರದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಸಮೀಕ್ಷೆಯಿಂದ ಬಿಟ್ಟುಹೋಗಿದ್ದಲ್ಲಿ ಸಂಪರ್ಕಿಸಿ ಸಮೀಕ್ಷೆಗೆ ಒಳಗಾಗಲೂ ಅವಕಾಶ ಸಹ ನೀಡಲಾಗಿದೆ ಎಂದರು.

ಏಪ್ರಿಲ್ 25 ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ 28 ರಂದು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು. ಕಂಪ್ಯೂಟರ್ ಹಾಗೂ ಸಮೀಕ್ಷೆಯ ಜ್ಞಾನವಿರುವ ಸಿಬ್ಬಂದಿಗಳನ್ನು ನಿಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

26 mins ago

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

2 hours ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

3 hours ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

4 hours ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

4 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

6 hours ago