ಮಂಡ್ಯ

ಒಳ ಮೀಸಲಾತಿ : ಮೇ 5 ರಿಂದ ದತ್ತಾಂಶ ಸಂಗ್ರಹಣೆ

ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್‌.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 17 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅಧಿಕಾರಿಗಳು ಸಮೀಕ್ಷೆ ನಡಯುವ ಸಂದರ್ಭದಲ್ಲಿ ಜಿಲ್ಲೆಯ‌ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ‌ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿರುತ್ತದೆ. ಇದಕ್ಕಾಗಿ ಏಪ್ರಿಲ್ 28 ರಂದು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಸುವ ಎನ್ಮುರೇಟರ್ಸ್ (enumerators) ಗೆ ತರಬೇತಿ ನೀಡಲಾಗುವುದು ಎಂದರು.

ಎನ್ಮುರೇಟರ್ಸ್ ಗಳನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಎನ್ಮುರೇಟರ್ಸ್ ಗುಂಪಿನ ಕೆಲಸವನ್ನು ಪರಿಶೀಲಿಸಲು ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಮೇ 17 ರ ಸಮೀಕ್ಷೆ ಮುಗಿದ ನಂತರ ಮೇ 19 ರಿಂದ 22 ರವರೆಗೆ ಸ್ಥಳ ನಿಗದಿ ಮಾಡಿ ಶಿಬಿರ ನಡೆಸಲಾಗುವುದು. ಶಿಬಿರದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಸಮೀಕ್ಷೆಯಿಂದ ಬಿಟ್ಟುಹೋಗಿದ್ದಲ್ಲಿ ಸಂಪರ್ಕಿಸಿ ಸಮೀಕ್ಷೆಗೆ ಒಳಗಾಗಲೂ ಅವಕಾಶ ಸಹ ನೀಡಲಾಗಿದೆ ಎಂದರು.

ಏಪ್ರಿಲ್ 25 ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ 28 ರಂದು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು. ಕಂಪ್ಯೂಟರ್ ಹಾಗೂ ಸಮೀಕ್ಷೆಯ ಜ್ಞಾನವಿರುವ ಸಿಬ್ಬಂದಿಗಳನ್ನು ನಿಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

1 hour ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

1 hour ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

1 hour ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

2 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

2 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

2 hours ago