ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 17 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಸಮೀಕ್ಷೆ ನಡಯುವ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿರುತ್ತದೆ. ಇದಕ್ಕಾಗಿ ಏಪ್ರಿಲ್ 28 ರಂದು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಸುವ ಎನ್ಮುರೇಟರ್ಸ್ (enumerators) ಗೆ ತರಬೇತಿ ನೀಡಲಾಗುವುದು ಎಂದರು.
ಎನ್ಮುರೇಟರ್ಸ್ ಗಳನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಎನ್ಮುರೇಟರ್ಸ್ ಗುಂಪಿನ ಕೆಲಸವನ್ನು ಪರಿಶೀಲಿಸಲು ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಮೇ 17 ರ ಸಮೀಕ್ಷೆ ಮುಗಿದ ನಂತರ ಮೇ 19 ರಿಂದ 22 ರವರೆಗೆ ಸ್ಥಳ ನಿಗದಿ ಮಾಡಿ ಶಿಬಿರ ನಡೆಸಲಾಗುವುದು. ಶಿಬಿರದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಸಮೀಕ್ಷೆಯಿಂದ ಬಿಟ್ಟುಹೋಗಿದ್ದಲ್ಲಿ ಸಂಪರ್ಕಿಸಿ ಸಮೀಕ್ಷೆಗೆ ಒಳಗಾಗಲೂ ಅವಕಾಶ ಸಹ ನೀಡಲಾಗಿದೆ ಎಂದರು.
ಏಪ್ರಿಲ್ 25 ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ 28 ರಂದು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು. ಕಂಪ್ಯೂಟರ್ ಹಾಗೂ ಸಮೀಕ್ಷೆಯ ಜ್ಞಾನವಿರುವ ಸಿಬ್ಬಂದಿಗಳನ್ನು ನಿಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…