ಮಂಡ್ಯ: ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು.
ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಸೋಮವಾರ ಇತಿಹಾಸ ವಿಭಾಗವು ಏರ್ಪಡಿಸಿದ “ಕರ್ನಾಟಕ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ” ಎಂಬ ವಿಷಯದ ಕುರಿತು ರೂಸಾ 2.0 ಅಡಿಯಲ್ಲಿ ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ರೈಲು ನಿಲ್ದಾಣದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದ ಬಲಭಾಗದ ಹಿಂಭಾಗಕ್ಕೆ 15ನೇ ಶತಮಾನದ ವೀರಗಲ್ಲು ಮಾಸ್ತಿಕಲ್ಲು ಇದೆ. ಜೊತೆಗೆ ಭಕ್ತರು ಎಣ್ಣೆ ದೀಪ ಪುಷ್ಪವನ್ನು ಇಟ್ಟು ಪೂಜೆ ಮಾಡುತ್ತಿದ್ದಾರೆ. ಪೇಟೆಯ ವೀರಪ್ಪನ ಗುಡಿ ವೀರಗಲ್ಲು ಕೂಡ ಇಂತಹ ಸ್ಥಿತಿಯಲ್ಲಿದೆ. ಇಂತಹ ನಶಿಸಿ ಹೋದ ಇತಿಹಾಸವನ್ನು ಪರಿಚಯಿಸಿ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆ ಗೆಜೆಟಿಯರ್ 2003 ರಲ್ಲಿ ಪ್ರಕಟವಾಗಿದ್ದು ಇದು ಮಂಡ್ಯ ಜಿಲ್ಲೆಯ ಪ್ರತಿಯೊಂದು ಊರಿನ ಮಾಹಿತಿ ಹೊಂದಿದೆ, ಜೊತೆಗೆ ಮಂಡ್ಯ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಗಳು ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ವೈವಿಧ್ಯತೆಯ ವಿಷಯಗಳನ್ನು ಒಳಗೊಂಡಿದೆ. ಇಂತಹ ವಿಷಯಗಳನ್ನು ವಿದ್ಯಾರ್ಥಿಗಳು ಓದಿದರೆ ಜಿಲ್ಲೆಯ ಬಗ್ಗೆ ಸಂಪೂರ್ಣ ತಿಳುವಳಿಕೆ ಬರುತ್ತದೆ. ಜಿಲ್ಲೆಯಲ್ಲಿರುವ ಬೂದನೂರು, ಬಸರಾಳು, ಅರಕೆರೆ, ನಾಗಮಂಗಲ, ಸಿಂಧಘಟ್ಟ, ಕಿಕ್ಕೇರಿ ದೇವಾಲಯಗಳು ಹೊಯ್ಸಳರ ಅದ್ಭುತ ನೈಪುಣ್ಯತೆಯ ಇತಿಹಾಸವನ್ನು ಸಾರುವಂಥಹವು ಎಂದು ಹೇಳಿದರು.
ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣೇಗೌಡ ಹೆಚ್ ಮಾತನಾಡಿ, ಇಂದಿನ ಪೀಳಿಗೆಗೆ ಇತಿಹಾಸದ ಓದು, ಗ್ರಹಿಕೆ ಹಿಂದೆಂದಿಗಿಂತಲೂ ಇಂದು ಪ್ರಸ್ತುತವಾಗಿದೆ. ಭಾರತದ ಇತಿಹಾಸ ಪರಂಪರೆ,ಸಂಸ್ಕೃತಿ, ಶ್ರೇಷ್ಠತೆಯನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದರು.
ಅಮೆರಿಕ ಯುರೋಪ್ ದೇಶಗಳ ಇತಿಹಾಸಕ್ಕಿಂತಲೂ ನಿಮ್ಮ ಊರಿನ ನಿಮ್ಮ ರಾಜ್ಯದ, ರಾಷ್ಟ್ರದ ಇತಿಹಾಸ ತಿಳಿದುಕೊಳ್ಳುವುದು ಬಹಳ ಮುಖ್ಯ. ಆಗ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿದರು.
ಮದ್ದೂರಿನ ಸಮೀಪ ಇರುವ ನಾಯಿಶಾಸನ ಮನುಷ್ಯ ಮತ್ತು ಪ್ರಾಣಿ ನಡುವಿನ ಬದುಕನ್ನು ತಿಳಿಸುವ ಹೆಗ್ಗುರುತ್ತಾಗಿದೆ. ಇದೇ ರೀತಿ ಪ್ರತಿ ಶಾಸನ ಸ್ಮಾರಕಗಳು ಮಾನವನ ಬದುಕಿನ ಒಂದೊಂದು ಕಥೆ ಹೇಳುವ ಸಾಕ್ಷಿಗಳವಾಗಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ ಪ್ರಭು ಕೆ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಮತ್ತು ಅಶೋಕನ ಶಾಸನಗಳು ಭಾರತದ ಭವ್ಯ ಇತಿಹಾಸವನ್ನು ಹೇಳುವಂಥವು ಸ್ಮಾರಕ ಮತ್ತು ಶಾಸನಗಳ ಅಧ್ಯಯನದ ಮೂಲಕ ಆಳವಾದ ಇತಿಹಾಸವನ್ನು ತಿಳಿಯಬಹುದು. ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚು ವಸ್ತು ಸಂಗ್ರಹಾಲಯಗಳಿವೆ ಅಲ್ಲಿ ಇತಿಹಾಸ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದೆ. ಆದರೆ ನಮ್ಮಲ್ಲಿ ಶಾಸನಗಳು ಅನಾಥವಾಗಿವೆ ಭಾರತದಲ್ಲಿ ಅವುಗಳನ್ನು ಉಳಿಸುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ. ಎನ್ ಎಸ್ ರಂಗರಾಜು ,ಇತಿಹಾಸಕಾರರಾದ ಮೊಹಮ್ಮದ್ ಖಲೀಮ್ ಮುಲ್ಲಾ, ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶಿವರಾಮು ಎಸ್, ಸಹ ಪ್ರಾಧ್ಯಾಪಕ ಡಾ. ಕವಿತಾ ಕೆಎಂ, ಸಹಾಯಕ ಪ್ರಾಧ್ಯಾಪಕ ಶಾಂತರಾಜು ಟಿ ಎನ್. ಪತ್ರಾಂಕಿತ ವ್ಯಸ್ಥಾಪಕ ರವಿಕಿರಣ್ ಕೆಪಿ. ಹೇಮಲತಾ.ರೂಸಾ 2.0 ಸಂಯೋಜಕರಾದ ಡಾ. ಮಂಗಳಮ್ಮ ಕೆ ಎಂ. ಉಪನ್ಯಾಸಕರಾದ ಪ್ರಕಾಶ್ ಜಿಜೆ ಪೂರ್ಣಿಮಾ ಹಾಜರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…