ಮಂಡ್ಯ

ನಶಿಸಿ ಹೋದ ಇತಿಹಾಸ ಪರಿಚಯಿಸಿ ; ಇತಿಹಾಸ ತಜ್ಞ ರಾಜೇಂದ್ರಪ್ಪ

ಮಂಡ್ಯ:  ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು  ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಸೋಮವಾರ ಇತಿಹಾಸ ವಿಭಾಗವು ಏರ್ಪಡಿಸಿದ “ಕರ್ನಾಟಕ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ” ಎಂಬ ವಿಷಯದ ಕುರಿತು ರೂಸಾ 2.0 ಅಡಿಯಲ್ಲಿ ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ರೈಲು ನಿಲ್ದಾಣದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದ ಬಲಭಾಗದ ಹಿಂಭಾಗಕ್ಕೆ 15ನೇ ಶತಮಾನದ ವೀರಗಲ್ಲು ಮಾಸ್ತಿಕಲ್ಲು ಇದೆ. ಜೊತೆಗೆ ಭಕ್ತರು ಎಣ್ಣೆ ದೀಪ ಪುಷ್ಪವನ್ನು ಇಟ್ಟು ಪೂಜೆ ಮಾಡುತ್ತಿದ್ದಾರೆ. ಪೇಟೆಯ ವೀರಪ್ಪನ ಗುಡಿ ವೀರಗಲ್ಲು ಕೂಡ ಇಂತಹ ಸ್ಥಿತಿಯಲ್ಲಿದೆ. ಇಂತಹ ನಶಿಸಿ ಹೋದ ಇತಿಹಾಸವನ್ನು ಪರಿಚಯಿಸಿ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆ ಗೆಜೆಟಿಯರ್ 2003 ರಲ್ಲಿ ಪ್ರಕಟವಾಗಿದ್ದು ಇದು ಮಂಡ್ಯ ಜಿಲ್ಲೆಯ ಪ್ರತಿಯೊಂದು ಊರಿನ ಮಾಹಿತಿ ಹೊಂದಿದೆ, ಜೊತೆಗೆ ಮಂಡ್ಯ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಗಳು ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ವೈವಿಧ್ಯತೆಯ ವಿಷಯಗಳನ್ನು ಒಳಗೊಂಡಿದೆ. ಇಂತಹ ವಿಷಯಗಳನ್ನು ವಿದ್ಯಾರ್ಥಿಗಳು ಓದಿದರೆ ಜಿಲ್ಲೆಯ ಬಗ್ಗೆ ಸಂಪೂರ್ಣ ತಿಳುವಳಿಕೆ ಬರುತ್ತದೆ. ಜಿಲ್ಲೆಯಲ್ಲಿರುವ ಬೂದನೂರು, ಬಸರಾಳು, ಅರಕೆರೆ, ನಾಗಮಂಗಲ, ಸಿಂಧಘಟ್ಟ, ಕಿಕ್ಕೇರಿ ದೇವಾಲಯಗಳು ಹೊಯ್ಸಳರ ಅದ್ಭುತ ನೈಪುಣ್ಯತೆಯ ಇತಿಹಾಸವನ್ನು ಸಾರುವಂಥಹವು ಎಂದು ಹೇಳಿದರು.

ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣೇಗೌಡ ಹೆಚ್  ಮಾತನಾಡಿ, ಇಂದಿನ ಪೀಳಿಗೆಗೆ ಇತಿಹಾಸದ ಓದು, ಗ್ರಹಿಕೆ ಹಿಂದೆಂದಿಗಿಂತಲೂ ಇಂದು ಪ್ರಸ್ತುತವಾಗಿದೆ. ಭಾರತದ ಇತಿಹಾಸ ಪರಂಪರೆ,ಸಂಸ್ಕೃತಿ, ಶ್ರೇಷ್ಠತೆಯನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದರು.

ಅಮೆರಿಕ ಯುರೋಪ್ ದೇಶಗಳ ಇತಿಹಾಸಕ್ಕಿಂತಲೂ ನಿಮ್ಮ ಊರಿನ ನಿಮ್ಮ ರಾಜ್ಯದ, ರಾಷ್ಟ್ರದ ಇತಿಹಾಸ ತಿಳಿದುಕೊಳ್ಳುವುದು ಬಹಳ ಮುಖ್ಯ. ಆಗ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿದರು.

ಮದ್ದೂರಿನ ಸಮೀಪ ಇರುವ ನಾಯಿಶಾಸನ ಮನುಷ್ಯ ಮತ್ತು ಪ್ರಾಣಿ ನಡುವಿನ ಬದುಕನ್ನು ತಿಳಿಸುವ ಹೆಗ್ಗುರುತ್ತಾಗಿದೆ. ಇದೇ ರೀತಿ ಪ್ರತಿ ಶಾಸನ ಸ್ಮಾರಕಗಳು ಮಾನವನ ಬದುಕಿನ ಒಂದೊಂದು ಕಥೆ ಹೇಳುವ ಸಾಕ್ಷಿಗಳವಾಗಿವೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ ಪ್ರಭು ಕೆ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಮತ್ತು ಅಶೋಕನ ಶಾಸನಗಳು ಭಾರತದ ಭವ್ಯ ಇತಿಹಾಸವನ್ನು ಹೇಳುವಂಥವು ಸ್ಮಾರಕ ಮತ್ತು ಶಾಸನಗಳ ಅಧ್ಯಯನದ ಮೂಲಕ ಆಳವಾದ ಇತಿಹಾಸವನ್ನು ತಿಳಿಯಬಹುದು. ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚು ವಸ್ತು ಸಂಗ್ರಹಾಲಯಗಳಿವೆ ಅಲ್ಲಿ ಇತಿಹಾಸ ಸಂಬಂಧಿಸಿದ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದೆ. ಆದರೆ ನಮ್ಮಲ್ಲಿ ಶಾಸನಗಳು ಅನಾಥವಾಗಿವೆ ಭಾರತದಲ್ಲಿ ಅವುಗಳನ್ನು ಉಳಿಸುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ. ಎನ್ ಎಸ್ ರಂಗರಾಜು ,ಇತಿಹಾಸಕಾರರಾದ  ಮೊಹಮ್ಮದ್ ಖಲೀಮ್ ಮುಲ್ಲಾ, ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶಿವರಾಮು ಎಸ್, ಸಹ ಪ್ರಾಧ್ಯಾಪಕ ಡಾ. ಕವಿತಾ ಕೆಎಂ, ಸಹಾಯಕ ಪ್ರಾಧ್ಯಾಪಕ ಶಾಂತರಾಜು ಟಿ ಎನ್. ಪತ್ರಾಂಕಿತ ವ್ಯಸ್ಥಾಪಕ ರವಿಕಿರಣ್ ಕೆಪಿ. ಹೇಮಲತಾ.ರೂಸಾ 2.0 ಸಂಯೋಜಕರಾದ ಡಾ. ಮಂಗಳಮ್ಮ ಕೆ ಎಂ. ಉಪನ್ಯಾಸಕರಾದ ಪ್ರಕಾಶ್ ಜಿಜೆ ಪೂರ್ಣಿಮಾ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

3 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

19 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

20 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

21 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago