ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಸದರಿ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು, ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು. ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು.
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…