ಮಂಡ್ಯ

ಸರ್ಕಾರ ಸತ್ತು ಹೋಗಿದೆಯೇ? ಬದುಕಿದೆಯಾ?: ಅಶ್ವಥ್‌ ನಾರಾಯಣ್‌ ಗುಡುಗು

ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್‌ ನಾರಾಯಣ್‌ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ ಅವರು, ಗಲಭೆಗಳನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆ ಹಾಗೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದನ್ನು ಖಂಡಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ನಮ್ಮನ್ನು ಕೆಲಸವಿಲ್ಲದವರು ಎನ್ನುತ್ತಿದ್ದಾರೆ. ನಮಗೆ ಕೆಲಸವಿಲ್ಲ ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಾ? ಮಸಾಲೆ ದೋಸೆ ತಿಂತಿದ್ದೀರಾ? ಎಂದು ಪ್ರಶ್ನೆ ಮಾಡಿದರು.

ಕೆಲಸವಿರುವ ಸರ್ಕಾರದ ನಾಯಕರು ಎಲ್ಲಿಲ್ಲಿಗೆ ಹೋಗಿದ್ದಾರೆ? ಒಬ್ಬನೇ ಒಬ್ಬ ಸಚಿವನಾಗಲಿ, ಶಾಸಕನಾಗಲಿ ಮದ್ದೂರಿಗೆ ಬಂದು ಜನರ ಸಂಕಷ್ಟ ಆಲಿಸಿಲಲ್.‌ ಈ ಸರ್ಕಾರ ಸತ್ತು ಹೋಗಿದೆಯಾ? ಬದುಕಿದೆಯಾ? ಎಂದು ಕಿಡಿಕಾರಿದರು.

ಇನ್ನು ಬಹುಮತದಿಂದ ಜನರು ನಿಮ್ಮ ಸರ್ಕಾರ ತಂದು ನಿಮಗೆ ಆಡಳಿತ ಕೊಟ್ಟಿದ್ದಾರೆ. ಅದಕ್ಕಾಗಿಯಾದರೂ ಗೌರವಿಸಿ ಚೆನ್ನಾಗಿ ಆಡಳಿತ ನಡೆಸಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅದನ್ನು ಮೊದಲು ಸರಿಪಡಿಸಿ. ಕೆಲಸವಿರುವ ನೀವು ಏನಾದರೂ ಮಾಡಿ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ, ಡಿಸಿಎಂ ವಿರುದ್ಧ ಗುಡುಗಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

13 mins ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

50 mins ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

2 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

2 hours ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

3 hours ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

3 hours ago