ಮಂಡ್ಯ

ಸರ್ಕಾರ ಸತ್ತು ಹೋಗಿದೆಯೇ? ಬದುಕಿದೆಯಾ?: ಅಶ್ವಥ್‌ ನಾರಾಯಣ್‌ ಗುಡುಗು

ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್‌ ನಾರಾಯಣ್‌ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ ಅವರು, ಗಲಭೆಗಳನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆ ಹಾಗೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದನ್ನು ಖಂಡಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ನಮ್ಮನ್ನು ಕೆಲಸವಿಲ್ಲದವರು ಎನ್ನುತ್ತಿದ್ದಾರೆ. ನಮಗೆ ಕೆಲಸವಿಲ್ಲ ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಾ? ಮಸಾಲೆ ದೋಸೆ ತಿಂತಿದ್ದೀರಾ? ಎಂದು ಪ್ರಶ್ನೆ ಮಾಡಿದರು.

ಕೆಲಸವಿರುವ ಸರ್ಕಾರದ ನಾಯಕರು ಎಲ್ಲಿಲ್ಲಿಗೆ ಹೋಗಿದ್ದಾರೆ? ಒಬ್ಬನೇ ಒಬ್ಬ ಸಚಿವನಾಗಲಿ, ಶಾಸಕನಾಗಲಿ ಮದ್ದೂರಿಗೆ ಬಂದು ಜನರ ಸಂಕಷ್ಟ ಆಲಿಸಿಲಲ್.‌ ಈ ಸರ್ಕಾರ ಸತ್ತು ಹೋಗಿದೆಯಾ? ಬದುಕಿದೆಯಾ? ಎಂದು ಕಿಡಿಕಾರಿದರು.

ಇನ್ನು ಬಹುಮತದಿಂದ ಜನರು ನಿಮ್ಮ ಸರ್ಕಾರ ತಂದು ನಿಮಗೆ ಆಡಳಿತ ಕೊಟ್ಟಿದ್ದಾರೆ. ಅದಕ್ಕಾಗಿಯಾದರೂ ಗೌರವಿಸಿ ಚೆನ್ನಾಗಿ ಆಡಳಿತ ನಡೆಸಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅದನ್ನು ಮೊದಲು ಸರಿಪಡಿಸಿ. ಕೆಲಸವಿರುವ ನೀವು ಏನಾದರೂ ಮಾಡಿ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ, ಡಿಸಿಎಂ ವಿರುದ್ಧ ಗುಡುಗಿದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

5 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

5 hours ago