ಮಂಡ್ಯ

ಬಾಲ್ಯ ವಿವಾಹ ತಲೆತಗ್ಗಿಸುವ ವಿಚಾರ : ನ್ಯಾ. ಎಂ.ಆನಂದ್ ಬೇಸರ

ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧಿಶ ಎಂ.ಆನಂದ್ ಹೇಳಿದರು.

ತಾಲ್ಲೂಕಿನ ಸಿದ್ದಯ್ಯನಕೊಪ್ಪಲು ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಬೆಂಗಳೂರು), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್‌ನ ಸಹಯೋಗದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಜಿಲ್ಲೆ ಘೋಷಣೆ ಅಂಗವಾಗಿ ಮಕ್ಕಳ ಕಾನೂನುಗಳ ಹಾಗೂ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಲ್ಲಿ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಾಲ್ಯ ವಿವಾಹ ಮಾಡುವುದು ನಿಲ್ಲಬೇಕು ಎಂದರು. ಮಕ್ಕಳು ಆಟ ಆಡುವ ವಯಸ್ಸಿನಲ್ಲಿ ಮದುವೆ ಮಾಡುವುದು ಏಕೆ? ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನಹರಿಸಬೇಕು, ಮಕ್ಕಳಿಗೆ ಸಹಾಯ ಮಾಡುವುದನ್ನು ಬಿಟ್ಟು ಬಾಲ್ಯ ವಿವಾಹವೆಂಬ ಪಿಡುಗಿಗೆ ದೂಡುವುದನ್ನು ಸಂಪೂರ್ಣವಾಗಿ ವಿರೋಧಿಸುವ ಮೂಲಕ ಎಚ್ಚರಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಯಾರೇ ಬಾಲ್ಯ ವಿವಾಹ ಮಾಡಿದರೆ ಮತ್ತು ಅದನ್ನು ಪ್ರೋತ್ಸಾಹಿಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬಹುದು ಎಂಬುದು ಕಾನೂನಿನಲ್ಲಿ ಇದೆ ಎನ್ನುವುದನ್ನು ಅರ್ಥ ಮಾಡಿಸಬೇಕು. ಈ ಸಂಬಂಧ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ತುರ್ತಾಗಿ ಮಾಡಬೇಕು ಎಂದು ಹೇಳಿದರು.

ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಂಧರಸ್ವಾಮಿ ಮಾತನಾಡಿ, ಮಕ್ಕಳಿಗೆ ಒಂದು ಮಗುವಾದರೆ ಅದನ್ನು ಬೆಳೆಸುವ ಪರಿ ಹೇಗಿರುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ವಿವಾಹ ಮಾಡಲು ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ ಇರಬೇಕೆಂಬುದು ಇದೆ. ಆದರೆ, ಇದನ್ನು ಬದಲಿಸಬೇಕೆನ್ನುವ ಅಭಿಪ್ರಾಯವಿದೆ. ಕಲಿಯುವ ವಯಸ್ಸಿನಲ್ಲಿ ಮದುವೆ ಸಂಕೋಲೆಯನ್ನು ತೊಡಿಸುವುದು ಬೇಡ ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಮಿಕ್ಕೆರೆ ವೆಂಕಟೇಶ್ ಮಾತನಾಡಿ, ಬಾಲ್ಯ ವಿವಾಹ ಮುಕ್ತ ಮಾಡಲು ಶಾಲಾ ಹಂತದಲ್ಲಿಯೇ ಪ್ರಯತ್ನ ಪಡಬೇಕು. ಬಾಲ್ಯ ವಿವಾಹ ಎಂಬುದು ದೊಡ್ಡ ಪಿಡುಗಾಗಿದೆ. ಇದರಿಂದ ಪೋಷಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ(ದಕ್ಷಿಣ ವಲಯ)ಮಹದೇವು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಕಾರ್ಯದರ್ಶಿ ಮಂಜುನಾಥ್, ಪ್ರಾಂಶುಪಾಲರಾದ ಸುನೀತಾ, ಕಾರ್ಯಕ್ರಮ ಸಂಯೋಜನಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

9 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago