ಮಂಡ್ಯ

ಬಾಲ್ಯ ವಿವಾಹ ತಲೆತಗ್ಗಿಸುವ ವಿಚಾರ : ನ್ಯಾ. ಎಂ.ಆನಂದ್ ಬೇಸರ

ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧಿಶ ಎಂ.ಆನಂದ್ ಹೇಳಿದರು.

ತಾಲ್ಲೂಕಿನ ಸಿದ್ದಯ್ಯನಕೊಪ್ಪಲು ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಬೆಂಗಳೂರು), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್‌ನ ಸಹಯೋಗದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಜಿಲ್ಲೆ ಘೋಷಣೆ ಅಂಗವಾಗಿ ಮಕ್ಕಳ ಕಾನೂನುಗಳ ಹಾಗೂ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಲ್ಲಿ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಾಲ್ಯ ವಿವಾಹ ಮಾಡುವುದು ನಿಲ್ಲಬೇಕು ಎಂದರು. ಮಕ್ಕಳು ಆಟ ಆಡುವ ವಯಸ್ಸಿನಲ್ಲಿ ಮದುವೆ ಮಾಡುವುದು ಏಕೆ? ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನಹರಿಸಬೇಕು, ಮಕ್ಕಳಿಗೆ ಸಹಾಯ ಮಾಡುವುದನ್ನು ಬಿಟ್ಟು ಬಾಲ್ಯ ವಿವಾಹವೆಂಬ ಪಿಡುಗಿಗೆ ದೂಡುವುದನ್ನು ಸಂಪೂರ್ಣವಾಗಿ ವಿರೋಧಿಸುವ ಮೂಲಕ ಎಚ್ಚರಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಯಾರೇ ಬಾಲ್ಯ ವಿವಾಹ ಮಾಡಿದರೆ ಮತ್ತು ಅದನ್ನು ಪ್ರೋತ್ಸಾಹಿಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬಹುದು ಎಂಬುದು ಕಾನೂನಿನಲ್ಲಿ ಇದೆ ಎನ್ನುವುದನ್ನು ಅರ್ಥ ಮಾಡಿಸಬೇಕು. ಈ ಸಂಬಂಧ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ತುರ್ತಾಗಿ ಮಾಡಬೇಕು ಎಂದು ಹೇಳಿದರು.

ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಂಧರಸ್ವಾಮಿ ಮಾತನಾಡಿ, ಮಕ್ಕಳಿಗೆ ಒಂದು ಮಗುವಾದರೆ ಅದನ್ನು ಬೆಳೆಸುವ ಪರಿ ಹೇಗಿರುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ವಿವಾಹ ಮಾಡಲು ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ ಇರಬೇಕೆಂಬುದು ಇದೆ. ಆದರೆ, ಇದನ್ನು ಬದಲಿಸಬೇಕೆನ್ನುವ ಅಭಿಪ್ರಾಯವಿದೆ. ಕಲಿಯುವ ವಯಸ್ಸಿನಲ್ಲಿ ಮದುವೆ ಸಂಕೋಲೆಯನ್ನು ತೊಡಿಸುವುದು ಬೇಡ ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಮಿಕ್ಕೆರೆ ವೆಂಕಟೇಶ್ ಮಾತನಾಡಿ, ಬಾಲ್ಯ ವಿವಾಹ ಮುಕ್ತ ಮಾಡಲು ಶಾಲಾ ಹಂತದಲ್ಲಿಯೇ ಪ್ರಯತ್ನ ಪಡಬೇಕು. ಬಾಲ್ಯ ವಿವಾಹ ಎಂಬುದು ದೊಡ್ಡ ಪಿಡುಗಾಗಿದೆ. ಇದರಿಂದ ಪೋಷಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ(ದಕ್ಷಿಣ ವಲಯ)ಮಹದೇವು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಕಾರ್ಯದರ್ಶಿ ಮಂಜುನಾಥ್, ಪ್ರಾಂಶುಪಾಲರಾದ ಸುನೀತಾ, ಕಾರ್ಯಕ್ರಮ ಸಂಯೋಜನಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

11 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

22 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

22 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

22 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

22 hours ago