ಮಂಡ್ಯ

ಬಸವಣ್ಣನವರ ಆರಾಧನೆಗಿಂತ ಅವರ ಆಶಯ ಪಾಲಿಸುವುದು ಅತ್ಯಗತ್ಯ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಪ್ರಸ್ತುತ ಸನ್ನಿವೇಶದಲ್ಲಿ ಬಸವಣ್ಣನವರ ವಚನ ಸಂದೇಶಗಳು ವಿಶ್ವದ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸೂಚಿಸುವಂತಿವೆ. ಹಾಗಾಗಿ ಎಲ್ಲರೂ ಬಸವಣ್ಣನವರನ್ನು ಆರಾಧಿಸುವುದಕ್ಕಿಂತ ಅವರ ವಚನ ಸಂದೇಶಗಳನ್ನು ಪಾಲಿಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿಗೇ ಜ್ಞಾನದ ಜ್ಯೋತಿ ಬೆಳಗಿಸಿದ ಬಸವಣ್ಣನವರನ್ನು ಪೂಜಿಸುವುದರಿಂದ ಅವರ ಸಂದೇಶವನ್ನೇ ಮರೆಮಾಚಿದಂತಾಗುತ್ತದೆ. ಹಾಗಾಗಿ ಬಸವಣ್ಣನವರ ಆರಾಧನೆಗಿಂತ ಅವರು ತಮ್ಮ ವಚನಗಳ ಮೂಲಕ ನೀಡಿರುವ ಸಂದೇಶಗಳನ್ನು ಅರಿತುಕೊಳ್ಳುವುದು ಮುಖ್ಯ ಎಂದರು.

ಮುಂದಿನ ಪೀಳಿಗೆಯ ಸಮ ಸಮಾಜದಲ್ಲಿ ನೆಮ್ಮದಿಯಿಂದಿರಬೇಕಾದರೆ, ಮಕ್ಕಳಿಗೆ ಬಸವ ತತ್ವಗಳ ಸಾರವನ್ನು ತಿಳಿಸಬೇಕಿದೆ. ಮಕ್ಕಳಿಗೆ ತಿಳಿಸಬೇಕೆಂದರೆ ಮೊದಲು ನಾವು ವಚನಗಳ ಆಶಯಗಳನ್ನು ಅರಿತುಕೊಳ್ಳಬೇಕು, ಬಳಿಕ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರೆ ಅವರು ಗ್ರಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬಸವಣ್ಣನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಬಸವಣ್ಣನವರ ಸುಮಾರು 1500 ಕ್ಕೂ ಹೆಚ್ಚು ವಚನಗಳನ್ನು ಸಂಗ್ರಹ ಮಾಡಲಾಗಿದೆ. ಸಮಾನತೆ ಇರಬೇಕು ಎಂದು ಬಯಸಿದ್ದ ಬಸವಣ್ಣ ತಮ್ಮ ಕಾವ್ಯದ ಮೂಲಕ ಸಾಮಾಜಿಕ ಜಾಗೃತಿಯನ್ನು ಹರಡಿದರು ಎಂದರು.

ಮುಖ್ಯವಾಗಿ ಲಿಂಗ ಅಥವಾ ಸಾಮಾಜಿಕ ತಾರತಮ್ಯ, ಮೂಢ ನಂಬಿಕೆಗಳು ಮತ್ತು ಆಚರಣೆಗಳನ್ನು ತಿರಸ್ಕರಿಸಿದ್ದರು. ದೇವರು ಬೇರೆ ಎಲ್ಲಿಯೂ ಇಲ್ಲ ಅವನು ನಮ್ಮೊಳಗೆ ಇದ್ದಾನೆ ಎಂದು ಬಸವಣ್ಣ ನಂಬಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೇಬಿ ಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವ ಸ್ವಾಮೀಜಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ, ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಮುಖಂಡರಾದ ಸುಂಡಹಳ್ಳಿ ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಮತ್ತಿತರರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

7 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

7 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

7 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

7 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

7 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

10 hours ago