ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ
ಮಂಡ್ಯ : ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸೂಚಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ ಎಂದರು.
ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ಸಂಬಂಧ ಪಟ್ಟ ಇಲಾಖೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯ ಸಂಬಂಧ ಪಟ್ಟ ವಾರಸುದಾರರ ದಾಖಲೆಗಳನ್ನು ಪಡೆದು ಕೂಡಲೇ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಎಲ್ಲ ತಹಸಿಲ್ದಾರ್ಗಳು ತಮ್ಮ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕುರಿತು ಜಾಗೃತಿ ಸಮಿತಿ ಸಭೆ ಹಾಗೂ ಕುಂದು ಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಸಮರ್ಪಕವಾಗಿ ಕುಂದು ಕೊರತೆಗಳ ಸಭೆ ಆಯೋಜನೆ ಮಾಡುವುದು ಸಂಬಂಧಪಟ್ಟ ಇಲಾಖೆಯ ಸಹಾಯಕ ನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.
ಜಾತಿ ಕುರಿತು ಇನ್ನೂ ಸಹ ಇರುವ ಅಸಹನೆಯನ್ನು ನಾಗರಿಕ ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರಿಕ ಪ್ರಜ್ಞಾವಂತರು ಅದನ್ನು ಖಂಡಿಸುವ ಕೆಲಸ ಮಾಡಬೇಕಿದೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸಾಧ್ಯವಾದಷ್ಟು ಬೇಗ ಮುಗಿಸಿ ಎಂದು ತಿಳಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ನೌಕರಿ ನೀಡುವ ಪ್ರಕ್ರಿಯೆ ಹಾಗೂ ಪಿಂಚಣಿ ನೀಡುವ ಸೌಲಭ್ಯಗಳನ್ನು ಶ್ರೀಘ್ರವಾಗಿ ನಡೆಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು, ಜಗೃತ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…