ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆನೇ ಕ್ರಾಂತಿ. ಇನ್ನು ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲವೆಂದು ಬಹುತೇಕ ಶಾಸಕರಲ್ಲಿ ಅಸಮಾಧಾನವಿದೆ. ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನು ಓದಿ : ಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ನನ್ನನ್ನು ಜನರು ಉಚ್ಚಾಟಿಸಿಲ್ಲ
ನನ್ನನ್ನು ಉಚ್ಚಾಟನೆ ಮಾಡಿದ್ದು ಬಿಜೆಪಿಯೇ ಹೊರತು ಜನರಲ್ಲ. ಹಿಂದೂಗಳ ಮತಗಳ ವಿಭಜನೆ ನನ್ನ ಉದ್ದೇಶವಲ್ಲ. ಒಂದಿಬ್ಬರು ಬಿಜೆಪಿ ಸಂಸದರು ಹೊರತುಪಡಿಸಿ ಉಳಿದವರೆಲ್ಲರೂ ನನ್ನ ಉಚ್ಚಾಟನೆಯನ್ನು ವಿರೋಧಿಸಿದ್ದರು. ಯಡಿಯೂರಪ್ಪ ಕುಟುಂಬದ ಜತೆ ನನ್ನ ಸಂಧಾನವಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ಶತಮೂರ್ಖ
ಪ್ರಿಯಾಂಕ ಖರ್ಗೆ ಒಬ್ಬ ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್ಎಸ್ಎಸ್ನ್ನು ನಿಷೇಧಿಸಲಾಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈತ ಏನೇನೋ ಮಾತಾಡ್ತಾನೆ. ಸೂರ್ಯ, ಚಂದ್ರ ಇರೋವರೆಗೂ ಆರ್ಎಸ್ಎಸ್ ಇರುತ್ತದೆ. ಸಿದ್ದರಾಮಯ್ಯ ಮಗ ಯತೀಂದ್ರ, ಜತೀಂದ್ರ, ಹರಿಪ್ರಸಾದ್ ಪಾಕಿಸ್ತಾನ್ ಏಜೆಂಟ್ ರೀತಿ ಮಾತಾಡ್ತಾರೆ. ಯತೀಂದ್ರ ಏನು ಮಾತಾಡುತ್ತಾನೆಂದು ಗೊತ್ತಾಗಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್…
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್…