ಮಂಡ್ಯ

ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ : ಯತ್ನಾಳ್‌

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆನೇ ಕ್ರಾಂತಿ. ಇನ್ನು ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲವೆಂದು ಬಹುತೇಕ ಶಾಸಕರಲ್ಲಿ ಅಸಮಾಧಾನವಿದೆ. ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿ : ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ

ನನ್ನನ್ನು ಜನರು ಉಚ್ಚಾಟಿಸಿಲ್ಲ
ನನ್ನನ್ನು ಉಚ್ಚಾಟನೆ ಮಾಡಿದ್ದು ಬಿಜೆಪಿಯೇ ಹೊರತು ಜನರಲ್ಲ. ಹಿಂದೂಗಳ ಮತಗಳ ವಿಭಜನೆ ನನ್ನ ಉದ್ದೇಶವಲ್ಲ. ಒಂದಿಬ್ಬರು ಬಿಜೆಪಿ ಸಂಸದರು ಹೊರತುಪಡಿಸಿ ಉಳಿದವರೆಲ್ಲರೂ ನನ್ನ ಉಚ್ಚಾಟನೆಯನ್ನು ವಿರೋಧಿಸಿದ್ದರು. ಯಡಿಯೂರಪ್ಪ ಕುಟುಂಬದ ಜತೆ ನನ್ನ ಸಂಧಾನವಿಲ್ಲ ಎಂದರು.

ಪ್ರಿಯಾಂಕ್ ಖರ್ಗೆ ಶತಮೂರ್ಖ
ಪ್ರಿಯಾಂಕ ಖರ್ಗೆ ಒಬ್ಬ ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್‌ನ್ನು ನಿಷೇಧಿಸಲಾಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈತ ಏನೇನೋ ಮಾತಾಡ್ತಾನೆ. ಸೂರ್ಯ, ಚಂದ್ರ ಇರೋವರೆಗೂ ಆರ್‌ಎಸ್ಎಸ್ ಇರುತ್ತದೆ. ಸಿದ್ದರಾಮಯ್ಯ ಮಗ ಯತೀಂದ್ರ, ಜತೀಂದ್ರ, ಹರಿಪ್ರಸಾದ್ ಪಾಕಿಸ್ತಾನ್ ಏಜೆಂಟ್ ರೀತಿ ಮಾತಾಡ್ತಾರೆ. ಯತೀಂದ್ರ ಏನು ಮಾತಾಡುತ್ತಾನೆಂದು ಗೊತ್ತಾಗಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

4 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago