87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ ಪ್ರೀತಿಗೆ ಮಂಡ್ಯ ಹೆಸರುವಾಸಿ ಎಂದರು.
ಈಗಾಗಲೇ ಎರಡು ಸಾಹಿತ್ಯ ಸಮ್ಮೇಳನ ಇಲ್ಲಿ ನಡೆದಿದ್ದು ಇದು ಮೂರನೇ ಸಮ್ಮೇಳನ. ಕರ್ನಾಟಕ ಎಂದು ನಾಮಕರಣ ಆದ ನಂತರ ಮೊದಲ ಸಮ್ಮೇಳನ ನಡೆದಿದ್ದು ಮಂಡ್ಯದಲ್ಲಿ ಅನ್ನೋದು ಮತ್ತೊಂದು ವಿಶೇಷ ಎಂದು ಹೇಳಿದರು.
ಸಾಹಿತ್ಯ ಸಮ್ಮೇಳನ ಎಂದರೆ ನಾಡು, ನುಡಿ, ಸೊಬಗು ಸೂಸುವ ಸಂಭ್ರಮದ ಜಾತ್ರೆ. ಸಮಸ್ತ ಕನ್ನಡಿಗರು ಒಂದೆಡೆ ಸೇರಿ ಚರ್ಚಿಸುವ ವೇದಿಕೆ. ಕನ್ನಡ ನಾಡಿನ ಹಿರಿಮೆ ಎತ್ತಿಹಿಡಿಯುವ ಕೆಲಸ ಸಾಹಿತ್ಯ ಸಮ್ಮೇಳನದ ಮೂಲಕ ಮಾಡಬೇಕಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕ್ಷೀಣಿಸುತ್ತಿರುವುದು ನಿಜಕ್ಕೂ ಬೇಸರ. ಕನ್ನಡ ಭಾಷೆ ಸಂಕಷ್ಟದಲ್ಲಿದೆ. ಮಕ್ಕಳಲ್ಲಿ ಕನ್ನಡ ಕಲಿಕೆ ಆಸಕ್ತಿ ಕುಸಿಯುತ್ತಿದೆ. ಇದಕ್ಕೆ ಕಾರಣ ಕನ್ನಡ ಅನ್ನದ ಭಾಷೆ ಆಗದಿರುವುದು. ಭಾಷೆ ಉಳಿದರೆ ಸಂಸ್ಕೃತಿ ಉಳಿದಂತೆ ಎಂದರು.
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…