ಮಂಡ್ಯ

ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆ: ಮಹೇಶ್‌ ಜೋಶಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ ಪ್ರೀತಿಗೆ ಮಂಡ್ಯ ಹೆಸರುವಾಸಿ ಎಂದರು.

ಈಗಾಗಲೇ ಎರಡು ಸಾಹಿತ್ಯ ಸಮ್ಮೇಳನ ಇಲ್ಲಿ ನಡೆದಿದ್ದು ಇದು ಮೂರನೇ ಸಮ್ಮೇಳನ. ಕರ್ನಾಟಕ ಎಂದು ನಾಮಕರಣ ಆದ ನಂತರ ಮೊದಲ ಸಮ್ಮೇಳನ ನಡೆದಿದ್ದು ಮಂಡ್ಯದಲ್ಲಿ ಅನ್ನೋದು ಮತ್ತೊಂದು ವಿಶೇಷ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನ ಎಂದರೆ ನಾಡು, ನುಡಿ, ಸೊಬಗು ಸೂಸುವ ಸಂಭ್ರಮದ ಜಾತ್ರೆ. ಸಮಸ್ತ ಕನ್ನಡಿಗರು ಒಂದೆಡೆ ಸೇರಿ ಚರ್ಚಿಸುವ ವೇದಿಕೆ. ಕನ್ನಡ ನಾಡಿನ ಹಿರಿಮೆ ಎತ್ತಿಹಿಡಿಯುವ ಕೆಲಸ ಸಾಹಿತ್ಯ ಸಮ್ಮೇಳನದ ಮೂಲಕ ಮಾಡಬೇಕಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕ್ಷೀಣಿಸುತ್ತಿರುವುದು ನಿಜಕ್ಕೂ ಬೇಸರ. ಕನ್ನಡ ಭಾಷೆ ಸಂಕಷ್ಟದಲ್ಲಿದೆ. ಮಕ್ಕಳಲ್ಲಿ ಕನ್ನಡ ಕಲಿಕೆ ಆಸಕ್ತಿ ಕುಸಿಯುತ್ತಿದೆ. ಇದಕ್ಕೆ ಕಾರಣ ಕನ್ನಡ ಅನ್ನದ ಭಾಷೆ ಆಗದಿರುವುದು. ಭಾಷೆ ಉಳಿದರೆ ಸಂಸ್ಕೃತಿ ಉಳಿದಂತೆ ಎಂದರು.

andolana

Recent Posts

ಕೂರ್ಗಳ್ಳಿ ಕೆರೆ ಒತ್ತುವರಿ ಕೂಗು; ಗ್ರಾಮಸ್ಥರಲ್ಲಿ ಹಲವು ಅನುಮಾನ

ಸಾಲೋಮನ್ ೨೨.೨೦ ವಿಸ್ತೀರ್ಣದ ಕೆರೆ ಈಗ ಉಳಿದಿರುವುದು ೫ ಎಕರೆ! ಅನೇಕ ವರ್ಷಗಳಿಂದ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಯಾರೇ…

42 mins ago

ಸ್ಥಳೀಯ ಸಂಸ್ಥೆ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ: ಭೋಸರಾಜು

ನವೀನ್ ಡಿಸೋಜ ಖಾಲಿ ಹುದ್ದೆಗಳ ಭರ್ತಿ ಸಂಬಂಧ ಚರ್ಚೆ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಹಿಂದಿನಿಂದಲೂ ಇದೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ…

47 mins ago

‘ಖಾಲಿ ಹುದ್ದೆ ಭರ್ತಿಗೆ ಕ್ರಮವಹಿಸುವುದು ಅಗತ್ಯ : ಸಚಿವ ಚಲುವರಾಯಸ್ವಾಮಿ

ಬಿ.ಟಿ. ಮೋಹನ್ ಕುಮಾರ್ ಶೇ.೬೦ರಷ್ಟು ಬಿ, ಸಿ, ಡಿ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸಂಬಂಧಪಟ್ಟ…

48 mins ago

ಬೀದಿ ಮಕ್ಕಳ ಆಶಾಕಿರಣ “ಚೇತನಾ”

ಪಂಜು ಗಂಗೊಳ್ಳಿ  ಹತ್ತನೇ ತರಗತಿ ಪರೀಕ್ಷೆಗಳು ಮುಗಿದು ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಮಕ್ಕಳಿಗೆ ಈ ಹತ್ತನೇ…

49 mins ago

ಓದುಗರ ಪತ್ರ: ಗಿಡಗಂಟೆ ತೆರವುಗೊಳಿಸಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ…

50 mins ago

ಅವಶ್ಯಕತೆಗೆ ಅನುಗುಣವಾಗಿ ನೇಮಕಾತಿ: ಸಚಿವ ವೆಂಕಟೇಶ್‌

ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ…

50 mins ago