ಮಂಡ್ಯ

ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆ: ಮಹೇಶ್‌ ಜೋಶಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ ಪ್ರೀತಿಗೆ ಮಂಡ್ಯ ಹೆಸರುವಾಸಿ ಎಂದರು.

ಈಗಾಗಲೇ ಎರಡು ಸಾಹಿತ್ಯ ಸಮ್ಮೇಳನ ಇಲ್ಲಿ ನಡೆದಿದ್ದು ಇದು ಮೂರನೇ ಸಮ್ಮೇಳನ. ಕರ್ನಾಟಕ ಎಂದು ನಾಮಕರಣ ಆದ ನಂತರ ಮೊದಲ ಸಮ್ಮೇಳನ ನಡೆದಿದ್ದು ಮಂಡ್ಯದಲ್ಲಿ ಅನ್ನೋದು ಮತ್ತೊಂದು ವಿಶೇಷ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನ ಎಂದರೆ ನಾಡು, ನುಡಿ, ಸೊಬಗು ಸೂಸುವ ಸಂಭ್ರಮದ ಜಾತ್ರೆ. ಸಮಸ್ತ ಕನ್ನಡಿಗರು ಒಂದೆಡೆ ಸೇರಿ ಚರ್ಚಿಸುವ ವೇದಿಕೆ. ಕನ್ನಡ ನಾಡಿನ ಹಿರಿಮೆ ಎತ್ತಿಹಿಡಿಯುವ ಕೆಲಸ ಸಾಹಿತ್ಯ ಸಮ್ಮೇಳನದ ಮೂಲಕ ಮಾಡಬೇಕಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕ್ಷೀಣಿಸುತ್ತಿರುವುದು ನಿಜಕ್ಕೂ ಬೇಸರ. ಕನ್ನಡ ಭಾಷೆ ಸಂಕಷ್ಟದಲ್ಲಿದೆ. ಮಕ್ಕಳಲ್ಲಿ ಕನ್ನಡ ಕಲಿಕೆ ಆಸಕ್ತಿ ಕುಸಿಯುತ್ತಿದೆ. ಇದಕ್ಕೆ ಕಾರಣ ಕನ್ನಡ ಅನ್ನದ ಭಾಷೆ ಆಗದಿರುವುದು. ಭಾಷೆ ಉಳಿದರೆ ಸಂಸ್ಕೃತಿ ಉಳಿದಂತೆ ಎಂದರು.

andolana

Recent Posts

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 mins ago

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

24 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

24 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

24 hours ago