ಮಂಡ್ಯ

ಪ್ಯಾರಾ ಟೇಬಲ್‌ಟೆನಿಸ್ನ್ ಚಾಂಪಿಯನ್ ಆಗಿ ಕೀರ್ತಿ ತಂದ ಜಗನ್ನಾಥ್

ಕಿಕ್ಕೇರಿ : ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕಮಲಮ್ಮ ಮಂಜುನಾಥೇಗೌಡ ಅವರ ಪುತ್ರ ವಿಶೇಷಚೇತನ ಜಗನ್ನಾಥ್ ಕ್ರೀಡಾ ಪ್ರತಿಭೆಯಾಗಿದ್ದು, ಭಾರತದ ಪ್ಯಾರಾ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ 2ನೇ ಸ್ಥಾನಗಳಿಸಿ ತಾಲ್ಲೂಕಿಗೆ ಮತ್ತು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದಿದ್ದಾರೆ.

ಅಲ್ಲದೆ ನವದೆಹಲಿ, ಕರ್ನಾಟಕ, ಚನ್ನೈ, ಗೋವಾ, ಮಧ್ಯಪ್ರದೇಶ, ಗುಜರಾತ್, ಗೌರತ್ ಹಲವು ಕಡೆ ನಡೆದ ಖೇಲೋ ಇಂಡಿಯಾ ಪ್ಯಾರಾ ಟೇಬಲ್ ಟೆನಿಸ್‌ನಲ್ಲಿ ಚಿನ್ನದ ಪದಕ, ಬೆಳ್ಳಿ ಪದಕ, ಕಂಚಿನ ಪದಕ ಗಳಿಸಿದ್ದು, ಪ್ರಥಮ, ದ್ವಿತಿಯ ಸ್ಥಾನದಲ್ಲಿ ಗೆಲವು ಸಾಽಸಿ ತಾಲ್ಲೂಕಿನ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಮೂರು ಬಾರಿ ರಾಜ್ಯ ಚಾಂಪಿಯನ್ ಆಗಿರುವ ಜಗನ್ನಾಥ್ ಅವರು ಟೋಕಿಯೋ-2025ರ ಅಂತರಾಷ್ಟ್ರೀಯ ಟೂರ್ನಮೆಂಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಸಜ್ಜಾಗುತ್ತಿದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಜಗನ್ನಾಥ್ ಅವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರು. ಕಳೆದ ೮ ವರ್ಷದ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಬೆನ್ನಿನ ಮೂಳೆ ಮುರಿದು ಅಂಗವಿಕತೆ ಬಾಧಿಸಿತು. ಈ ಅಂಗವಿಕಲತೆಯನ್ನು ಮೆಟ್ಟಿ ನಿಂತು ಅವರ ನಿರಂತರ ಪರಿಶ್ರಮ, ಆತ್ಮವಿಶ್ವಾಸ, ಅತಿ ದೊಡ್ಡ ಕನಸು, ಗೆಲ್ಲಲೇಬೇಕು ಎನ್ನುವ ಛಲ ಇರುವ ಜಗನ್ನಾಥ್ ಅವರ ಸಾಧನೆಗೆ ನಮ್ಮೇಲ್ಲರ ಸಹಕಾರ ಪ್ರೋತ್ಸಾಹ ಮುಖ್ಯವಾಗಿದ್ದು, ಎಲ್ಲಾ ಜನತೆ ಕೈ ಜೋಡಿಸಿ, ತಾಲ್ಲೂಕಿಗೆ ರಾಜ್ಯಕ್ಕೆ, ದೇಶಕ್ಕೆ ಮತ್ತೊಮ್ಮೆ ಗೌರವ ತಂದುಕೊಡಲಿ ಎಂಬುದು ಜನತೆಯ ಹಾರೈಕೆ.

ಕ್ರೀಡೆಯಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳುತ್ತಿರುವ ಜಗನ್ನಾಥ್ ಅವರಿಗೆ ಸೈಕಲ್‌ಬ್ರಾಂಡ್ ಅಗರಬತ್ತಿ ಕಂಪನಿಯು ಆರ್ಥಿಕ ನೆರವು ನೀಡಿ ಗೌರವಿಸಿ ಪ್ರೋತ್ಸಾಹ ನೀಡಿದ್ದಾರೆ. ತಾಲ್ಲೂಕಿನ ಜನತೆಯ ಪರವಾಗಿ ಅಗರಬತ್ತಿ ಕಂಪನಿಗೆ ಧನ್ಯವಾದಗಳನ್ನು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

7 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

7 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

8 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

9 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

9 hours ago