ಮಂಡ್ಯ

ಪ್ಯಾರಾ ಟೇಬಲ್‌ಟೆನಿಸ್ನ್ ಚಾಂಪಿಯನ್ ಆಗಿ ಕೀರ್ತಿ ತಂದ ಜಗನ್ನಾಥ್

ಕಿಕ್ಕೇರಿ : ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕಮಲಮ್ಮ ಮಂಜುನಾಥೇಗೌಡ ಅವರ ಪುತ್ರ ವಿಶೇಷಚೇತನ ಜಗನ್ನಾಥ್ ಕ್ರೀಡಾ ಪ್ರತಿಭೆಯಾಗಿದ್ದು, ಭಾರತದ ಪ್ಯಾರಾ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ 2ನೇ ಸ್ಥಾನಗಳಿಸಿ ತಾಲ್ಲೂಕಿಗೆ ಮತ್ತು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದಿದ್ದಾರೆ.

ಅಲ್ಲದೆ ನವದೆಹಲಿ, ಕರ್ನಾಟಕ, ಚನ್ನೈ, ಗೋವಾ, ಮಧ್ಯಪ್ರದೇಶ, ಗುಜರಾತ್, ಗೌರತ್ ಹಲವು ಕಡೆ ನಡೆದ ಖೇಲೋ ಇಂಡಿಯಾ ಪ್ಯಾರಾ ಟೇಬಲ್ ಟೆನಿಸ್‌ನಲ್ಲಿ ಚಿನ್ನದ ಪದಕ, ಬೆಳ್ಳಿ ಪದಕ, ಕಂಚಿನ ಪದಕ ಗಳಿಸಿದ್ದು, ಪ್ರಥಮ, ದ್ವಿತಿಯ ಸ್ಥಾನದಲ್ಲಿ ಗೆಲವು ಸಾಽಸಿ ತಾಲ್ಲೂಕಿನ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಮೂರು ಬಾರಿ ರಾಜ್ಯ ಚಾಂಪಿಯನ್ ಆಗಿರುವ ಜಗನ್ನಾಥ್ ಅವರು ಟೋಕಿಯೋ-2025ರ ಅಂತರಾಷ್ಟ್ರೀಯ ಟೂರ್ನಮೆಂಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಸಜ್ಜಾಗುತ್ತಿದ್ದಾರೆ ಎಂಬುದು ಹೆಮ್ಮೆಯ ಸಂಗತಿ.

ಜಗನ್ನಾಥ್ ಅವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರು. ಕಳೆದ ೮ ವರ್ಷದ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಬೆನ್ನಿನ ಮೂಳೆ ಮುರಿದು ಅಂಗವಿಕತೆ ಬಾಧಿಸಿತು. ಈ ಅಂಗವಿಕಲತೆಯನ್ನು ಮೆಟ್ಟಿ ನಿಂತು ಅವರ ನಿರಂತರ ಪರಿಶ್ರಮ, ಆತ್ಮವಿಶ್ವಾಸ, ಅತಿ ದೊಡ್ಡ ಕನಸು, ಗೆಲ್ಲಲೇಬೇಕು ಎನ್ನುವ ಛಲ ಇರುವ ಜಗನ್ನಾಥ್ ಅವರ ಸಾಧನೆಗೆ ನಮ್ಮೇಲ್ಲರ ಸಹಕಾರ ಪ್ರೋತ್ಸಾಹ ಮುಖ್ಯವಾಗಿದ್ದು, ಎಲ್ಲಾ ಜನತೆ ಕೈ ಜೋಡಿಸಿ, ತಾಲ್ಲೂಕಿಗೆ ರಾಜ್ಯಕ್ಕೆ, ದೇಶಕ್ಕೆ ಮತ್ತೊಮ್ಮೆ ಗೌರವ ತಂದುಕೊಡಲಿ ಎಂಬುದು ಜನತೆಯ ಹಾರೈಕೆ.

ಕ್ರೀಡೆಯಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳುತ್ತಿರುವ ಜಗನ್ನಾಥ್ ಅವರಿಗೆ ಸೈಕಲ್‌ಬ್ರಾಂಡ್ ಅಗರಬತ್ತಿ ಕಂಪನಿಯು ಆರ್ಥಿಕ ನೆರವು ನೀಡಿ ಗೌರವಿಸಿ ಪ್ರೋತ್ಸಾಹ ನೀಡಿದ್ದಾರೆ. ತಾಲ್ಲೂಕಿನ ಜನತೆಯ ಪರವಾಗಿ ಅಗರಬತ್ತಿ ಕಂಪನಿಗೆ ಧನ್ಯವಾದಗಳನ್ನು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago