ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಪ್ರತಿ ವರ್ಷವೂ ಮಂಡ್ಯ ಜಿಲ್ಲಾಡಳಿತದಿಂದ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯೂ ಇಂದಿನಿಂದ ಅಕ್ಟೋಬರ್.7ರವರೆಗೆ ನಾಲ್ಕು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಇಂದು ಮಧ್ಯಾಹ್ನ ಕಿರಂಗೂರಿನ ಬನ್ನಿ ಮಂಟಪದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಮಹೇಂದ್ರ, ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಇರಲಿವೆ.
ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಕುಮ್ಕಿ ಆನೆಗಳಾಗಿವೆ.
ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ಹಿರಿಯ ನಟ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…