ಮಂಡ್ಯ

ಆಗಸ್ಟ್ 5 ಮತ್ತು 6ರಂದು ಮಂಡ್ಯದಲ್ಲಿ ಜನಾಂದೋಲನ ಯಾತ್ರೆ

ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಡೆಸಿರುವ ಅವ್ಯವಹಾರ ಮತ್ತು ಹಗರಣಗಳನ್ನು ಜನತೆಯ ಮುಂದೆ ಇಡುವ ಜವಾಬ್ದಾರಿಯ ಆಧಾರದ ಮೇಲೆ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು, ಮುಖಂಡರು, ರಾಜ್ಯಮಟ್ಟದ ನಾಯಕರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೇರಿದಂತೆ ಹಲವಾರು ಮಂದಿ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಆಗಸ್ಟ್ ಐದರಂದು ಮದ್ದೂರಿನ ಕ್ರೀಡಾಂಗಣದಲ್ಲಿ ಹಾಗೂ ಆಗಸ್ಟ್ 6 ರಂದು ಮಂಡ್ಯ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಜನಾಂದೋಲನ ಯಾತ್ರೆ ನಡೆಯಲಿದ್ದು ಆದ ಕಾರಣ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬಂಧುಗಳು ಹಾಗೂ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ, ಚಿದಂಬರಂ, ಮುಡಾ ಅಧ್ಯಕ್ಷ ನಹೀಂ ಸೇರಿದಂತೆ ಇತರರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌…

59 mins ago

ಒಡಿಶಾದಲ್ಲಿ ವಿಮಾನ ಪತನ: ಪೈಲಟ್‌ ಸೇರಿ 7 ಪ್ರಯಾಣಿಕರಿಗೆ ಗಾಯ

ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್‌ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ…

1 hour ago

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ…

1 hour ago

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ, ಪದ್ಮನಾಭನಗರದಲ್ಲಿ: ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 hours ago

ಗೃಹಲಕ್ಷ್ಮೀ ಸಹಕಾರ ಸಂಘ ಸೇರುವ ಮಹಿಳೆಯರಿಗೆ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…

2 hours ago

ಹನೂರು| ಲೊಕ್ಕನಹಳ್ಳಿ ಗ್ರಾಮದಲ್ಲಿ ನಿರಂತರ ಕಾಡಾನೆ ದಾಳಿ

ಮಹಾದೇಶ್‌ ಎಂ ಗೌಡ  ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…

3 hours ago