ಮಂಡ್ಯ

ಆಗಸ್ಟ್ 5 ಮತ್ತು 6ರಂದು ಮಂಡ್ಯದಲ್ಲಿ ಜನಾಂದೋಲನ ಯಾತ್ರೆ

ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಡೆಸಿರುವ ಅವ್ಯವಹಾರ ಮತ್ತು ಹಗರಣಗಳನ್ನು ಜನತೆಯ ಮುಂದೆ ಇಡುವ ಜವಾಬ್ದಾರಿಯ ಆಧಾರದ ಮೇಲೆ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು, ಮುಖಂಡರು, ರಾಜ್ಯಮಟ್ಟದ ನಾಯಕರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೇರಿದಂತೆ ಹಲವಾರು ಮಂದಿ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಆಗಸ್ಟ್ ಐದರಂದು ಮದ್ದೂರಿನ ಕ್ರೀಡಾಂಗಣದಲ್ಲಿ ಹಾಗೂ ಆಗಸ್ಟ್ 6 ರಂದು ಮಂಡ್ಯ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಜನಾಂದೋಲನ ಯಾತ್ರೆ ನಡೆಯಲಿದ್ದು ಆದ ಕಾರಣ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬಂಧುಗಳು ಹಾಗೂ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ, ಚಿದಂಬರಂ, ಮುಡಾ ಅಧ್ಯಕ್ಷ ನಹೀಂ ಸೇರಿದಂತೆ ಇತರರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

4 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago