ಮಂಡ್ಯ

ಜೆಡಿಎಸ್-ಬಿಜೆಪಿಗೆ ಲೋಕಸಭೆ ಚುನಾವಣೆಯ ಭಯ ಶುರುವಾಗಿದೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಬಿಜೆಪಿ-ಜೆಡಿಎಸ್‍ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ದೊಡ್ಡ ದೊಡ್ಡ ಹಗರಣವಾಗಿದೆ ತನಿಖೆ ಮಾಡಿ ಬಿಲ್ ಕೊಡುತ್ತೇವೆ, ಜೆಡಿಎಸ್-ಬಿಜೆಪಿ ಅವರಿಗೆ ಏನು ಹೇಳುವುದಕ್ಕಾಗಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಅದಕ್ಕೆ ಅವರಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಸಿಗುತ್ತಿಲ್ಲ, ಆದ್ದರಿಂದ ಸುಳ್ಳು ಪತ್ರ ಬರೆಯುವ ಕೆಲಸ ಮಾಡಿದ್ದಾರೆ, ಆ ಪತ್ರ ನಕಲಿ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ದೊಡ್ಡ ದೊಡ್ಡ ಹಗರಣ ಆಗಿದೆ. ತನಿಖೆ ಮಾಡದೆ ಬಿಲ್ ಕೊಡಿ ಅಂದ್ರೆ ಹೇಗೆ? ಎಲ್ಲಾ ತನಿಖೆ ಮಾಡಿ ಕೊಡ್ತಿವಿ ಅಂತ ಹೇಳಿದ್ದೇವೆ ಎಂದರು. ಸರ್ಕಾರಿ ನೌಕರರು ಗಟ್ಟಿಯಾಗಿ ನಿಲ್ಲುತೀರಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತೀರಾ, ಆಗ ಸರ್ಕಾರಕ್ಕೆ ಗೌರವ ಸಿಗುತ್ತೆ. ಜನರಿಗೆ ಕಿರುಕುಳ ಕೊಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಸರ್ಕಾರದ ಯೋಜನೆ ಕಾರ್ಯಕ್ರಮವನ್ನು ಜನರಿಗೆ ತಲುಪಿಸಿ ಎಂದು ಸಚಿವರು ಸಲಹೆ ನೀಡಿದರು.

lokesh

Recent Posts

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

2 hours ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

2 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

2 hours ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

2 hours ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

2 hours ago