ಮಂಡ್ಯ : ಬಿಜೆಪಿ-ಜೆಡಿಎಸ್ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ದೊಡ್ಡ ದೊಡ್ಡ ಹಗರಣವಾಗಿದೆ ತನಿಖೆ ಮಾಡಿ ಬಿಲ್ ಕೊಡುತ್ತೇವೆ, ಜೆಡಿಎಸ್-ಬಿಜೆಪಿ ಅವರಿಗೆ ಏನು ಹೇಳುವುದಕ್ಕಾಗಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಅದಕ್ಕೆ ಅವರಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಸಿಗುತ್ತಿಲ್ಲ, ಆದ್ದರಿಂದ ಸುಳ್ಳು ಪತ್ರ ಬರೆಯುವ ಕೆಲಸ ಮಾಡಿದ್ದಾರೆ, ಆ ಪತ್ರ ನಕಲಿ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ದೊಡ್ಡ ದೊಡ್ಡ ಹಗರಣ ಆಗಿದೆ. ತನಿಖೆ ಮಾಡದೆ ಬಿಲ್ ಕೊಡಿ ಅಂದ್ರೆ ಹೇಗೆ? ಎಲ್ಲಾ ತನಿಖೆ ಮಾಡಿ ಕೊಡ್ತಿವಿ ಅಂತ ಹೇಳಿದ್ದೇವೆ ಎಂದರು. ಸರ್ಕಾರಿ ನೌಕರರು ಗಟ್ಟಿಯಾಗಿ ನಿಲ್ಲುತೀರಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತೀರಾ, ಆಗ ಸರ್ಕಾರಕ್ಕೆ ಗೌರವ ಸಿಗುತ್ತೆ. ಜನರಿಗೆ ಕಿರುಕುಳ ಕೊಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಸರ್ಕಾರದ ಯೋಜನೆ ಕಾರ್ಯಕ್ರಮವನ್ನು ಜನರಿಗೆ ತಲುಪಿಸಿ ಎಂದು ಸಚಿವರು ಸಲಹೆ ನೀಡಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…