ಮಂಡ್ಯ : ಬಿಜೆಪಿ-ಜೆಡಿಎಸ್ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ದೊಡ್ಡ ದೊಡ್ಡ ಹಗರಣವಾಗಿದೆ ತನಿಖೆ ಮಾಡಿ ಬಿಲ್ ಕೊಡುತ್ತೇವೆ, ಜೆಡಿಎಸ್-ಬಿಜೆಪಿ ಅವರಿಗೆ ಏನು ಹೇಳುವುದಕ್ಕಾಗಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಅದಕ್ಕೆ ಅವರಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಸಿಗುತ್ತಿಲ್ಲ, ಆದ್ದರಿಂದ ಸುಳ್ಳು ಪತ್ರ ಬರೆಯುವ ಕೆಲಸ ಮಾಡಿದ್ದಾರೆ, ಆ ಪತ್ರ ನಕಲಿ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ದೊಡ್ಡ ದೊಡ್ಡ ಹಗರಣ ಆಗಿದೆ. ತನಿಖೆ ಮಾಡದೆ ಬಿಲ್ ಕೊಡಿ ಅಂದ್ರೆ ಹೇಗೆ? ಎಲ್ಲಾ ತನಿಖೆ ಮಾಡಿ ಕೊಡ್ತಿವಿ ಅಂತ ಹೇಳಿದ್ದೇವೆ ಎಂದರು. ಸರ್ಕಾರಿ ನೌಕರರು ಗಟ್ಟಿಯಾಗಿ ನಿಲ್ಲುತೀರಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತೀರಾ, ಆಗ ಸರ್ಕಾರಕ್ಕೆ ಗೌರವ ಸಿಗುತ್ತೆ. ಜನರಿಗೆ ಕಿರುಕುಳ ಕೊಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಸರ್ಕಾರದ ಯೋಜನೆ ಕಾರ್ಯಕ್ರಮವನ್ನು ಜನರಿಗೆ ತಲುಪಿಸಿ ಎಂದು ಸಚಿವರು ಸಲಹೆ ನೀಡಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…