ಮಂಡ್ಯ : ಬಿಜೆಪಿ-ಜೆಡಿಎಸ್ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ದೊಡ್ಡ ದೊಡ್ಡ ಹಗರಣವಾಗಿದೆ ತನಿಖೆ ಮಾಡಿ ಬಿಲ್ ಕೊಡುತ್ತೇವೆ, ಜೆಡಿಎಸ್-ಬಿಜೆಪಿ ಅವರಿಗೆ ಏನು ಹೇಳುವುದಕ್ಕಾಗಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಅದಕ್ಕೆ ಅವರಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಸಿಗುತ್ತಿಲ್ಲ, ಆದ್ದರಿಂದ ಸುಳ್ಳು ಪತ್ರ ಬರೆಯುವ ಕೆಲಸ ಮಾಡಿದ್ದಾರೆ, ಆ ಪತ್ರ ನಕಲಿ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ದೊಡ್ಡ ದೊಡ್ಡ ಹಗರಣ ಆಗಿದೆ. ತನಿಖೆ ಮಾಡದೆ ಬಿಲ್ ಕೊಡಿ ಅಂದ್ರೆ ಹೇಗೆ? ಎಲ್ಲಾ ತನಿಖೆ ಮಾಡಿ ಕೊಡ್ತಿವಿ ಅಂತ ಹೇಳಿದ್ದೇವೆ ಎಂದರು. ಸರ್ಕಾರಿ ನೌಕರರು ಗಟ್ಟಿಯಾಗಿ ನಿಲ್ಲುತೀರಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತೀರಾ, ಆಗ ಸರ್ಕಾರಕ್ಕೆ ಗೌರವ ಸಿಗುತ್ತೆ. ಜನರಿಗೆ ಕಿರುಕುಳ ಕೊಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಸರ್ಕಾರದ ಯೋಜನೆ ಕಾರ್ಯಕ್ರಮವನ್ನು ಜನರಿಗೆ ತಲುಪಿಸಿ ಎಂದು ಸಚಿವರು ಸಲಹೆ ನೀಡಿದರು.
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…