Mysore
19
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೆಡಿಎಸ್‌ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಡೆಗೆ ಕೌಂಟರ್‌ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ ಎನ್ನಲಾಗಿದ್ದು, ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾರಂಭ ಆಯೋಜಿಸುವ ಮೂಲಕ ಕಾಂಗ್ರೆಸ್‌ ಜನಕಲ್ಯಾಣ ಸಮಾವೇಶಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಬಳಿಕ ಹಳೇ ಮೈಸೂರು ಭಾಗವನ್ನು ಕಬ್ಜಾ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸಿಗರ ಪವರ್‌ ಶೋಗೆ ಪ್ರತ್ಯುತ್ತರ ನೀಡಲು ಜೆಡಿಎಸ್‌ ಪ್ಲಾನ್‌ ಮಾಡಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಎಚ್‌ಡಿಕೆ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ.

ಇದೇ ಡಿಸೆಂಬರ್.‌5ರಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಗುರಿಯನ್ನು ಜೆಡಿಎಸ್‌ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ.

ಈ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್‌ ಕಾಆರ್ಯಕರ್ತರಿಗೆ ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ ಗಟ್ಟಿಗೊಳಿಸಲು ಚಿಂತಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!