ಮಂಡ್ಯ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೆಡಿಎಸ್‌ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಡೆಗೆ ಕೌಂಟರ್‌ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ ಎನ್ನಲಾಗಿದ್ದು, ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾರಂಭ ಆಯೋಜಿಸುವ ಮೂಲಕ ಕಾಂಗ್ರೆಸ್‌ ಜನಕಲ್ಯಾಣ ಸಮಾವೇಶಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಬಳಿಕ ಹಳೇ ಮೈಸೂರು ಭಾಗವನ್ನು ಕಬ್ಜಾ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸಿಗರ ಪವರ್‌ ಶೋಗೆ ಪ್ರತ್ಯುತ್ತರ ನೀಡಲು ಜೆಡಿಎಸ್‌ ಪ್ಲಾನ್‌ ಮಾಡಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಎಚ್‌ಡಿಕೆ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ.

ಇದೇ ಡಿಸೆಂಬರ್.‌5ರಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಗುರಿಯನ್ನು ಜೆಡಿಎಸ್‌ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ.

ಈ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್‌ ಕಾಆರ್ಯಕರ್ತರಿಗೆ ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ ಗಟ್ಟಿಗೊಳಿಸಲು ಚಿಂತಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

17 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

17 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

17 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

18 hours ago