ಮಂಡ್ಯ: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್ಗೆ ಒಲಿದಿದ್ದಾಳೆ.
ಕಾಂಗ್ರೆಸ್ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನ ನಾಗೇಶ್ ಆಯ್ಕೆಯಾಗಿದ್ದಾರೆ.
ಈ ಮೂಲಕ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವಾಗಲೇ ಆಪರೇಷನ್ ಹಸ್ತ ಮಾಡಿ ಜೆಡಿಎಸ್ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಅವರು ಸೆಡ್ಡು ಹೊಡೆದಿದ್ದು, ಮತ್ತೆ ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಓರ್ವ ಪ್ರಭಾವಿ ನಾಯಕನನ್ನು ತಮ್ಮ ಹಿಡಿತಕ್ಕೆ ತೆಗದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರದ ಪಾರುಪತ್ಯ ಸಾಧಿಸಲು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಚುನಾವಣೆ ನಡೆಯುವುದಕ್ಕೂ ಮುಂಚೆ ಇಂದು ನಗರಸಭೆ ಆವರಣದಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
ಎರಡೂ ಬಣದವರು ಪ್ರತ್ಯೇಕ ವಾಹನಗಳಲ್ಲಿ ನಗರಸಭೆ ಆವರಣಕ್ಕೆ ಬಂದ ಸಂದರ್ಭ ತೀವ್ರ ನೂಕುನುಗ್ಗಲು ಉಂಟಾಗಿತ್ತು.
ಬಳಿಕ ಸ್ಥಳಕ್ಕಾಗಮಿಸಿದ ಕುಮಾರಸ್ವಾಮಿ ಅವರು, ಸ್ವತಃ ಗೇಟಿನ ಬಳಿ ತೆರಳಿ ಸದಸ್ಯರ ವಾಹನವನ್ನು ಪೊಲೀಸರ ಭದ್ರತೆಯಲ್ಲಿ ಆವರಣದೊಳಕ್ಕೆ ಕರೆ ತರುವಲ್ಲಿ ಯಶಸ್ವಿಯಾದರು.
ಬಳಿಕ ಚುನಾವಣೆ ಪ್ರಕ್ರಿಯೆ ನಡೆದು ಜೆಡಿಎಸ್ ಗೆಲುವು ಸಾಧಿಸಿತು. ಈ ವೇಳೆ ನಗರಸಭಾ ಆವರಣದೊಳಗೆ ಜೆಡಿಎಸ್ ಸದಸ್ಯರು ಸಿಹಿ ಹಂಚಿ ಖುಷಿಪಟ್ಟರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…