ಮಂಡ್ಯ

ಪುಟ್ಟಣ್ಣಯ್ಯ ಫೌಂಡೇಶ್‌ನ್‌ನಿಂದ ಉದ್ಯೋಗದ ಭರವಸೆ : ಸಂದರ್ಶನ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು.

ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂದರ್ಶನದಲ್ಲಿ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅವರು ಭಾಗವಹಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭಕೋರಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಪುಟ್ಟಣ್ಣಯ್ಯ ಫೌಂಡೇಶನ್ ಹಲವು ಕಂಪೆನಿಗಳನ್ನು ಕ್ಷೇತ್ರಕ್ಕೆ ಕರೆತಂದು ಯುವಕ-ಯುವತಿಯರ ಸಂದರ್ಶನ ನಡೆಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಿದೆ. ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ನ.೧ರಂದು ಯದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಲು ವೆಬ್ ಆರಂಭಿಸಲಾಗಿತ್ತು, ೩೫೦ಕ್ಕೂ ಅಧಿಕ ಯುವಕ-ಯುವತಿಯರು ಹೆಸರು ನೋಂದಾಯಿಸಿಕೊಂಡಿದ್ದರು.

ಇದನ್ನೂ ಓದಿ:-ಸಾಲಭಾದೆ : ರೈತ ಆತ್ಮಹತ್ಯೆ

ಅದರ ಭಾಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮೈಸೂರಿನ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯವರು ಆಗಮಿಸಿ,ಸಂದರ್ಶನ ನಡೆಸಿ ಆಯ್ಕೆಯಾದ ಯುವಕ-ಯುವತಿಯರಿಗೆ ವಾರದೊಳಗೆ ಉದ್ಯೋಗ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಿದೆ. ಮುಂದಿನ ದಿನಗಳಲ್ಲಿ ಕಂಪೆನಿಯು ಪಟ್ಟಣದಲ್ಲಿ ಕಂಪೆನಿ ಶಾಖೆಯನ್ನು ತೆರೆದು ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುಟ್ಟಣ್ಣಯ್ಯ ಫೌಂಡೇಷನ್‌ನ ಸ್ಮಿತಾ ಪುಟ್ಟಣ್ಣಯ್ಯ ಮಾತನಾಡಿ, ಶಿಕ್ಷಣ, ನಿರುದ್ಯೋಗ ನಿವಾರಣೆ, ರೈತರ ಅಭಿವೃದ್ಧಿ, ಮಾರುಕಟ್ಟೆ, ಸ್ವಯಂ ಉದ್ಯೋಗ, ಬಡತನ ನಿವಾರಣೆ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಕಂಪೆನಿಗಳ ಸಹಯೋಗ ಪಡೆದುಕೊಂಡು ಫೌಂಡೇಶನ್ ಕೆಲಸ ಮಾಡುತ್ತಿದೆ ಎಂದರು.

ಈ ವೇಳೆ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯ ದಕ್ಷಿಣ ಭಾರತ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಫಖ್, ರವಿಕುಮಾರ್, ಶಶಿಕಾಂತ್, ದೀಕ್ಷಿತ್, ಪುಟ್ಟಣ್ಣಯ್ಯ ಫೌಂಡೇಷನ್ ನಿರ್ದೇಶಕ ಹಿರೇಮರಳಿ ರಣಜಿತ್, ಮಾಧ್ಯಮ ಸಂಯೋಜಕ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

52 seconds ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

7 mins ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

13 mins ago