ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು.
ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂದರ್ಶನದಲ್ಲಿ ಶಾಸಕ ದರ್ಶನ್ಪುಟ್ಟಣ್ಣಯ್ಯ ಅವರು ಭಾಗವಹಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭಕೋರಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಪುಟ್ಟಣ್ಣಯ್ಯ ಫೌಂಡೇಶನ್ ಹಲವು ಕಂಪೆನಿಗಳನ್ನು ಕ್ಷೇತ್ರಕ್ಕೆ ಕರೆತಂದು ಯುವಕ-ಯುವತಿಯರ ಸಂದರ್ಶನ ನಡೆಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಿದೆ. ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ನ.೧ರಂದು ಯದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಲು ವೆಬ್ ಆರಂಭಿಸಲಾಗಿತ್ತು, ೩೫೦ಕ್ಕೂ ಅಧಿಕ ಯುವಕ-ಯುವತಿಯರು ಹೆಸರು ನೋಂದಾಯಿಸಿಕೊಂಡಿದ್ದರು.
ಇದನ್ನೂ ಓದಿ:-ಸಾಲಭಾದೆ : ರೈತ ಆತ್ಮಹತ್ಯೆ
ಅದರ ಭಾಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮೈಸೂರಿನ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯವರು ಆಗಮಿಸಿ,ಸಂದರ್ಶನ ನಡೆಸಿ ಆಯ್ಕೆಯಾದ ಯುವಕ-ಯುವತಿಯರಿಗೆ ವಾರದೊಳಗೆ ಉದ್ಯೋಗ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಿದೆ. ಮುಂದಿನ ದಿನಗಳಲ್ಲಿ ಕಂಪೆನಿಯು ಪಟ್ಟಣದಲ್ಲಿ ಕಂಪೆನಿ ಶಾಖೆಯನ್ನು ತೆರೆದು ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪುಟ್ಟಣ್ಣಯ್ಯ ಫೌಂಡೇಷನ್ನ ಸ್ಮಿತಾ ಪುಟ್ಟಣ್ಣಯ್ಯ ಮಾತನಾಡಿ, ಶಿಕ್ಷಣ, ನಿರುದ್ಯೋಗ ನಿವಾರಣೆ, ರೈತರ ಅಭಿವೃದ್ಧಿ, ಮಾರುಕಟ್ಟೆ, ಸ್ವಯಂ ಉದ್ಯೋಗ, ಬಡತನ ನಿವಾರಣೆ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಕಂಪೆನಿಗಳ ಸಹಯೋಗ ಪಡೆದುಕೊಂಡು ಫೌಂಡೇಶನ್ ಕೆಲಸ ಮಾಡುತ್ತಿದೆ ಎಂದರು.
ಈ ವೇಳೆ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯ ದಕ್ಷಿಣ ಭಾರತ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಫಖ್, ರವಿಕುಮಾರ್, ಶಶಿಕಾಂತ್, ದೀಕ್ಷಿತ್, ಪುಟ್ಟಣ್ಣಯ್ಯ ಫೌಂಡೇಷನ್ ನಿರ್ದೇಶಕ ಹಿರೇಮರಳಿ ರಣಜಿತ್, ಮಾಧ್ಯಮ ಸಂಯೋಜಕ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…