Judge Settles Case by Visiting Litigants Directly; Draws Widespread Public Appreciation
ಮಳವಳ್ಳಿ: ನ್ಯಾಯಾಧೀಶರೇ, ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರರು ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಪ್ರಸಂಗ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆದಿದೆ.
ಪಟ್ಟಣದ ನ್ಯಾಯಾಲಯದ ಅವರಣದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಾವೆಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಮಯದಲ್ಲಿ ದಾವೆಯೊಂದರ ಕಕ್ಷಿದಾರರೊಬ್ಬರು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಒಳಗೆ ವಿಚಾರಣೆಗೆ ಭಾಗವಹಿಸಲು ಕಷ್ಟಸಾಧ್ಯವಾಗಲಿಲ್ಲ.
ವಿಚಾರ ತಿಳಿದ ಅಪರ ಸಿವಿಲ್ ನ್ಯಾಯಾಧೀಶರು ನ್ಯಾಯಾಲಯದ ಹೊರಗೆ ಬಂದು ಕಕ್ಷಿದಾರರಿದ್ದ ಸ್ಥಳಕ್ಕೆ ಧಾವಿಸಿ ಅಹವಾಲನ್ನು ಆಲಿಸಿ ಬಳಿಕ ದಾವೆಯನ್ನು ಇತ್ಯರ್ಥಪಡಿಸಿದ್ದಾರೆ.
ನ್ಯಾಯಾಧೀಶರ ಈ ನಡೆಯನ್ನು ಸ್ಥಳದಲ್ಲಿದ್ದ ವಕೀಲರು ಹಾಗೂ ಕಕ್ಷಿದಾರರು ಮೆಚ್ಚುಗೆ ಸೂಚಿಸುವುದರ ಜೊತೆಗೆ ನ್ಯಾಯಾಧೀಶರ ಕಾರ್ಯಪರತೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕಕ್ಷಿದಾರರನ್ನು ಕುರಿತು ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇಡೀ ರಾಷ್ಟ್ರದಾದ್ಯಂತ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸುವುದರ ಮೂಲಕ ವ್ಯಾಜ್ಯ ಮುಕ್ತ ಜೀವನವನ್ನು ನಿರ್ವಹಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗುತ್ತಿದೆ. ಇದಲ್ಲದೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡು ನ್ಯಾಯಾಲಯಕ್ಕೆ ಅಲೆದಾಡುವುದರ ಮೂಲಕ ನಿಮ್ಮ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಕರೆ ನೀಡಿದರು.
ಒಟ್ಟಿನಲ್ಲಿ ನ್ಯಾಯಾಧೀಶರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ, ಸರಳತೆ ಮರೆಯುವುದರ ಮೂಲಕ ಅದಾಲತ್ ಕಾರ್ಯಕ್ರಮದ ನಿಜವಾದ ಅರ್ಥಕ್ಕೆ ಉದಾಹರಣೆಯಾದರು.
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…