Judge Settles Case by Visiting Litigants Directly; Draws Widespread Public Appreciation
ಮಳವಳ್ಳಿ: ನ್ಯಾಯಾಧೀಶರೇ, ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರರು ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಪ್ರಸಂಗ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆದಿದೆ.
ಪಟ್ಟಣದ ನ್ಯಾಯಾಲಯದ ಅವರಣದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಾವೆಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಮಯದಲ್ಲಿ ದಾವೆಯೊಂದರ ಕಕ್ಷಿದಾರರೊಬ್ಬರು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಒಳಗೆ ವಿಚಾರಣೆಗೆ ಭಾಗವಹಿಸಲು ಕಷ್ಟಸಾಧ್ಯವಾಗಲಿಲ್ಲ.
ವಿಚಾರ ತಿಳಿದ ಅಪರ ಸಿವಿಲ್ ನ್ಯಾಯಾಧೀಶರು ನ್ಯಾಯಾಲಯದ ಹೊರಗೆ ಬಂದು ಕಕ್ಷಿದಾರರಿದ್ದ ಸ್ಥಳಕ್ಕೆ ಧಾವಿಸಿ ಅಹವಾಲನ್ನು ಆಲಿಸಿ ಬಳಿಕ ದಾವೆಯನ್ನು ಇತ್ಯರ್ಥಪಡಿಸಿದ್ದಾರೆ.
ನ್ಯಾಯಾಧೀಶರ ಈ ನಡೆಯನ್ನು ಸ್ಥಳದಲ್ಲಿದ್ದ ವಕೀಲರು ಹಾಗೂ ಕಕ್ಷಿದಾರರು ಮೆಚ್ಚುಗೆ ಸೂಚಿಸುವುದರ ಜೊತೆಗೆ ನ್ಯಾಯಾಧೀಶರ ಕಾರ್ಯಪರತೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕಕ್ಷಿದಾರರನ್ನು ಕುರಿತು ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇಡೀ ರಾಷ್ಟ್ರದಾದ್ಯಂತ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸುವುದರ ಮೂಲಕ ವ್ಯಾಜ್ಯ ಮುಕ್ತ ಜೀವನವನ್ನು ನಿರ್ವಹಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗುತ್ತಿದೆ. ಇದಲ್ಲದೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡು ನ್ಯಾಯಾಲಯಕ್ಕೆ ಅಲೆದಾಡುವುದರ ಮೂಲಕ ನಿಮ್ಮ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಕರೆ ನೀಡಿದರು.
ಒಟ್ಟಿನಲ್ಲಿ ನ್ಯಾಯಾಧೀಶರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ, ಸರಳತೆ ಮರೆಯುವುದರ ಮೂಲಕ ಅದಾಲತ್ ಕಾರ್ಯಕ್ರಮದ ನಿಜವಾದ ಅರ್ಥಕ್ಕೆ ಉದಾಹರಣೆಯಾದರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…