ಮಂಡ್ಯ

ನ್ಯಾಯಾಲಯದಿಂದ ಕಕ್ಷಿದಾರರ ಬಳಿಯೇ ಬಂದು ದಾವೆ ಇತ್ಯರ್ಥಪಡಿಸಿದ ನ್ಯಾಯಾಧೀಶರು: ಸಾರ್ವಜನಿಕರಿಂದ ತೀವ್ರ ಪ್ರಶಂಸೆ

ಮಳವಳ್ಳಿ: ನ್ಯಾಯಾಧೀಶರೇ, ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರರು ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಪ್ರಸಂಗ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದಿದೆ.

ಪಟ್ಟಣದ ನ್ಯಾಯಾಲಯದ ಅವರಣದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಾವೆಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ ಸಮಯದಲ್ಲಿ ದಾವೆಯೊಂದರ ಕಕ್ಷಿದಾರರೊಬ್ಬರು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದ ಒಳಗೆ ವಿಚಾರಣೆಗೆ ಭಾಗವಹಿಸಲು ಕಷ್ಟಸಾಧ್ಯವಾಗಲಿಲ್ಲ.

ವಿಚಾರ ತಿಳಿದ ಅಪರ ಸಿವಿಲ್ ನ್ಯಾಯಾಧೀಶರು ನ್ಯಾಯಾಲಯದ ಹೊರಗೆ ಬಂದು ಕಕ್ಷಿದಾರರಿದ್ದ ಸ್ಥಳಕ್ಕೆ ಧಾವಿಸಿ ಅಹವಾಲನ್ನು ಆಲಿಸಿ ಬಳಿಕ ದಾವೆಯನ್ನು ಇತ್ಯರ್ಥಪಡಿಸಿದ್ದಾರೆ.

ನ್ಯಾಯಾಧೀಶರ ಈ ನಡೆಯನ್ನು ಸ್ಥಳದಲ್ಲಿದ್ದ ವಕೀಲರು ಹಾಗೂ ಕಕ್ಷಿದಾರರು ಮೆಚ್ಚುಗೆ ಸೂಚಿಸುವುದರ ಜೊತೆಗೆ ನ್ಯಾಯಾಧೀಶರ ಕಾರ್ಯಪರತೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕಕ್ಷಿದಾರರನ್ನು ಕುರಿತು ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಇಡೀ ರಾಷ್ಟ್ರದಾದ್ಯಂತ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸುವುದರ ಮೂಲಕ ವ್ಯಾಜ್ಯ ಮುಕ್ತ ಜೀವನವನ್ನು ನಿರ್ವಹಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗುತ್ತಿದೆ. ಇದಲ್ಲದೆ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡು ನ್ಯಾಯಾಲಯಕ್ಕೆ ಅಲೆದಾಡುವುದರ ಮೂಲಕ ನಿಮ್ಮ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಕರೆ ನೀಡಿದರು.

ಒಟ್ಟಿನಲ್ಲಿ ನ್ಯಾಯಾಧೀಶರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ, ಸರಳತೆ ಮರೆಯುವುದರ ಮೂಲಕ ಅದಾಲತ್ ಕಾರ್ಯಕ್ರಮದ ನಿಜವಾದ ಅರ್ಥಕ್ಕೆ ಉದಾಹರಣೆಯಾದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago