ಮಂಡ್ಯ

ಸ್ವಾರ್ಥ ಸಾಧನೆ ಮಾಡುತ್ತಿರುವ ಅಪ್ಪ-ಮಕ್ಕಳನ್ನು ತಿರಸ್ಕರಿಸಿ: ಸಚಿವ ಎನ್.ಚಲುವರಾಯಸ್ವಾಮಿ.

ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೇ ಮಂಡ್ಯದಲ್ಲಿ ಪಕ್ಷ ಉಳಿಸುವ ಸಲುವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳುತ್ತಿರುವ ಕುಮಾರಸ್ವಾಮಿ ಅವರಿಂದ ಜಿಲ್ಲೆಗೆ ಏನು ಕೊಡುಗೆ ಸಿಕ್ಕಿದೆ ಎಂದು ಪ್ರಶ್ನಿಸಿದರು.

ಗಳಿಗೆಗೊಂದು ಗಂಟೆಗೊಂದು ಸುಳ್ಳು ಹೇಳುವ, ಕಣ್ಣೀರ ಕೋಡಿ ಹರಿಸಿ ಭಾವನಾತ್ಮಕ ಸಂಬಂಧವನ್ನು ಮುಂದಿಟ್ಟುಕೊಂಡು ಮತ ಕೇಳುವ ಸುಳ್ಳುಗಾರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಭಾರಿ ಸೋಲಿನ ಕಹಿಯನ್ನು ಉಣಿಸುವ ಮೂಲಕ ಜಿಲ್ಲೆಯ ಜನತೆ ತಕ್ಕಪಾಠ ಕಲಿಸಬೇಕು ಎಂದರು.

ಕಾವೇರಿ ನದಿ ನೀರಿನ ಹೆಸರಿನಲ್ಲಿ ಜಿಲ್ಲೆಯ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗೆ ದ್ರೋಹ ಮಾಡಿದ್ದಾರೆ. ಸ್ವಾರ್ಥ ಸಾಧನೆ ಮಾಡಿಕೊಂಡು ಬಿಜೆಪಿ ಪಕ್ಷಕ್ಕೆ ಶರಣಾಗಿರುವ ಅಪ್ಪಮಕ್ಕಳಿಗೆ ಜಿಲ್ಲೆಯ ಜನತೆ ಬುದ್ಧಿ ಕಲಿಸಬೇಕು ಎಂದು ಆಕ್ರೋಶ ಹೊರ ಹಾಕಿದರು.

ಕಾಂಗ್ರೇಸ್ ಕಾರ್ಯಕರ್ತರು ತಮ್ಮಲ್ಲಿನ ಅಸಮಾಧಾನ ಹಾಗೂ ಭಿನ್ನಮತವನ್ನು ಬದಿಗಿಟ್ಟು ಕೆಲಸ ಮಾಡಿ ಕಾಂಗ್ರೇಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಿ ನಾನು ನಿಮ್ಮ ಮನೆಮಗನಂತೆ ಕೆಲಸ ಮಾಡುತ್ತೇನೆ. ನಾವು ಅಭಿವೃದ್ಧಿ ಮಾಡಲಿಲ್ಲ ಎಂದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನು ತಿರಸ್ಕರಿಸಿ ಮನೆಗೆ ಕಳಿಸಿ, ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ತುಂಬಲು ಕಾಂಗ್ರೇಸ್ ಬೆಂಬಲಿಸಿ ಎಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

15 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

16 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

20 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago