ಮಂಡ್ಯ

ನ್ಯಾ.ನಾಗಮೋಹನ್‌ ದಾಸ್‌ ವರದಿ ಅವೈಜ್ಞಾನಿಕ : ವೆಂಕಟಗಿರಿಯಯ್ಯ

ಮಂಡ್ಯ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕ ಸದಸ್ಯ ವಿಚಾರಣಾ ಒಳ ಮೀಸಲಾತಿ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಸರ್ಕಾರ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಒಳ ಮೀಸಲಾತಿ ಮಾಡಲು ವೈಜ್ಞಾನಿಕ ಮತ್ತು ನ್ಯಾಯಸಮ್ಮತ ವರದಿ ಪಡೆಯಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಂದಿನ ಚುನಾವಣೆ ಬರುವವರೆಗೂ ಕಾಲದೂಡುವ ಹುನ್ನಾರ ನಡೆಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಎಸ್.ಎಂ.ಕೃಷ್ಣರಿಂದ ನ್ಯಾ.ಹನುಮಂತಪ್ಪ ಆಯೋಗ, ಧರ್ಮಸಿಂಗ್‌ರಿಂದ ಎ.ಜೆ.ಸದಾಶಿವ ಆಯೋಗ ಹೀಗೆ ಸರ್ಕಾರಗಳು ೩೦ ವರ್ಷಗಳಿಂದ ಸಮೀಕ್ಷೆಗೆ ಆಯೋಗಗಳನ್ನು ರಚಿಸಿ, ಅವರ ವರದಿಯನ್ನು ತಿರಸ್ಕರಿಸುವುದಕ್ಕೆ ಸೀಮಿತಗೊಂಡಿವೆ. ಅಂತೆಯೇ ಸಿದ್ದರಾಮಯ್ಯ ಸರ್ಕಾರ ಇದೀಗ ಆಯೋಗದ ಹಲವು ನ್ಯೂನ್ಯತೆಗಳಿಂದ ಕೂಡಿದ ವರದಿ ಪಡೆದಿದ್ದು, ಮೀಸಲಾತಿ ಜಾರಿ ಮಾಡಿದರೂ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದರೆ ಮೀಸಲಾತಿ ತಿರಸ್ಕರಿಸುವಂತೆ ವರಿದಿ ಪಡೆಯಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಮೀಕ್ಷೆಯ ವರದಿ ಮೂಲಕ ಅಸ್ಪೃಶ್ಯ ಜಾತಿಗಳನ್ನು ಒಟ್ಟುಗೂಡಿಸಿ ಮೀಸಲು ವರ್ಗೀಕರಣ ಮಾಡುವ ಬದಲಿಗೆ ಜಾತಿಗಳ ವಿಭಜನೀಕರಣ ಮಾಡಿ, ಅಸ್ಪೃಶ್ಯ ಜಾತಿಗಳನ್ನು ಒಡೆದು ಆಳುವ ಕಿರಾತಕ ಮನಸ್ಥಿತಿಯನ್ನು ತೋರುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ವರದಿಯಿಂದಾಗಿ ಮೀಸಲಾತಿ ವರ್ಗೀಕರಣ, ದಲಿತರ ಏಕೀಕರಣವಾಗುವ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು, ಆದಿಕರ್ನಾಟಕ, ಆದಿ ದ್ರಾವಿಡ ಎಂದು ಪ್ರತ್ಯೇಕವಾಗಿ ನಮೂದಾಗಿರುವ ಹೊಲಯ-ಮಾದಿಗ ಸಂಬಂಧಿತ ಜಾತಿಗಳಿಗೆ ಅನುಗುಣವಾಗಿ ಜಾತಿ ಸಮೀಕ್ಷೆ ಮಾಡಬೇಕು. ಛಲವಾದಿ ಜಾತಿಯು ಹೊಲೆಯ ಸಂಬಂಧಿತ ಜಾತಿಯಾಗಿದ್ದು, ಒಟ್ಟಾಗಿ ಸೇರಿಸಿ ಮೀಸಲಾತಿ ಪ್ರಮಾಣ ನಿಗದಿ ಮಾಡಬೇಕು. ನಾಗಮೋಹನ ದಾಸ್ ವರದಿಯ ನ್ಯೂನ್ಯತೆ ಸರಿಪಡಿಸಿ ಪರಿಶಿಷ್ಟ ಜಾರಿ ಮೀಸಲಾತಿ ವರ್ಗೀಕರಣ ಜಾರಿಗೊಳಿಸಬೇಕು. ೧೯೯೦ರ ಭಾರತ ಸರ್ಕಾರ ತಿದ್ದುಪಡಿಯಂತೆ ಬೌದ್ಧ ಧಮ್ಮಕ್ಕೆ ಮರಳಿದ ಅಸ್ಪೃಶ್ಯರನ್ನು ನವ ಬೌದ್ಧರೆಂದು ಪರಿಗಣಿಸಿ, ಮೀಸಲಾತಿಯಲ್ಲಿ ನವಬೌದ್ಧ ಎಂಬುದನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಾ ಆನಂದ್, ಮದ್ದೂರು ತಾಲ್ಲೂಕು ಅಧ್ಯಕ್ಷ ಮುತ್ತರಾಜು, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶರಾವತಿ ಅಶ್ವಥ್, ನಿಂಗಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

9 hours ago